Monday, 27 February 2017

ಪ್ರೀತಿ ವಿಚಾರದಲ್ಲಿ ಗಲಾಟೆ, ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯ ಇರಿದು ಕೊಲೆ














ಬೆಂಗಳೂರು, ಫೆಬ್ರವರಿ 28: ಮಕ್ಕಳ ನಡುವೆ ಪ್ರೀತಿ ವಿಚಾರದಲ್ಲಿ ಎದ್ದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.ಯಲಹಂಕ ಸರಕಾರಿ ಸಂಯುಕ್ತ ಕಾಲೇಜಿನ ವಾರ್ಷಿಕೋತ್ಸವದ ದಿನ ತಂಡ ಕಟ್ಟಿಕೊಂಡು ಬಂದು ಹಳೆ ವಿದ್ಯಾರ್ಥಿಗಳಿಬ್ಬರು ಹರ್ಷ (15) ಎನ್ನುವ 10ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಕೊಂದಿದ್ದಾರೆ. ಈತ ಯಲಹಂಕದ ಸುರಭಿ ಲೇಔಟ್ ನಿವಾಸಿ ಹಾಲು ವ್ಯಾಪಾರಿ ನಾರಾಯಣಪ್ಪ ಎನ್ನುವವರ ಮಗನಾಗಿದ್ದಾನೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.[ಬೆಂಗಳೂರಿನಲ್ಲಿ ಗಗನಸಖಿಯ ಮೇಲುಡುಪು ಎಳೆದಿದ್ದ ಆರೋಪಿ ಬಂಧನ]
ಕೊಲೆಗೆ ಕಾರಣ:
ಹರ್ಷನ ತರಗತಿಯಲ್ಲಿ ಓದುತ್ತಿರುವ ಬಾಲಕಿಯೋರ್ವಳನ್ನು ಐಟಿಐ ವಿದ್ಯಾರ್ಥಿಯೊಬ್ಬ ತುಂಬಾ ಹಚ್ಚಿಕೊಂಡಿದ್ದ. ಇದೇ ಬಾಲಕಿ ಜತೆ ಹರ್ಷನೂ ಆತ್ಮೀಯನಾಗಿದ್ದ.ಈ ವಿಚಾರ ಇಬ್ಬರ ನಡುವೆ ಮನಸ್ತಾಪಕ್ಕೆ ಕಾರಣವಾಗಿತ್ತು. ಇದರಿಂದ ಆಗಾಗ ಇಬ್ಬರ ಮಧ್ಯೆ ಸಣ್ಣ ಪುಟ್ಟ ಗಲಾಟೆಗಳು ನಡೆಯುತ್ತಿದ್ದವು.[ ಬೆಂಗಳೂರು: ಮರ್ಮಾಂಗಕ್ಕೆ ಒದ್ದು ಗಂಡನ ಕೊಲೆ ಮಾಡಿದ್ಲು ಹೆಂಡ್ತಿ]
http://adskpak.com/?type=2&id=sunildalavai&sid=40364
10 ದಿನಗಳ ಹಿಂದೆ ಹರ್ಷನಿಗೆ ನಾನು ಪ್ರೀತಿಸುತ್ತಿರುವವಳ ಜತೆ ನೀನು ಆತ್ಮೀಯನಾಗಿರುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದ. ಹೀಗಿದ್ದೂ ಆತ್ಮೀಯತೆ ಮುಂದುವರಿದಿದೆ. ಜತೆಗೆ ಕಾಲೇಜು ವಾರ್ಷಿಕೋತ್ವದಲ್ಲಿ ಫೂಟ್ಬಾಲ್ ತಂಡವನ್ನು ಗೆಲ್ಲಿಸಿದ್ದಕ್ಕಾಗಿ ಹರ್ಷನಿಗೆ ವೇದಿಕೆಯಲ್ಲಿ ಬಹುಮಾನವನ್ನೂ ನೀಡಲಾಗಿತ್ತು.
ಇದನ್ನೆಲ್ಲಾ ನೋಡಿದ ಐಟಿಐ ವಿದ್ಯಾರ್ಥಿ ವಾರ್ಷಿಕೋತ್ಸವ ಕಾರ್ಯಕ್ರಮದಿಂದ ಹೊರಗೆ ಹೋಗಿ ಗ್ಯಾಂಗ್ ಸಿದ್ದಪಡಿಸಿ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಹರ್ಷ ಮತ್ತು ಆತನ ಗೆಳೆಯರ ಮೇಲೆ ದಾಳಿ ಮಾಡಿದ್ದಾನೆ. ಹರ್ಷನ ಎದೆಗೆ ಚಾಕು ಇರಿದಿದ್ದರಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಹರ್ಷನ ಗೆಳೆಯರಿಗೂ ಗಂಭೀರ ಗಾಯಗಳಾಗಿವೆ.
ಘಟನೆ ತಪ್ಪಿಸಲು ಬೇರೆ ವಿದ್ಯಾರ್ಥಿಗಳು ಕಲ್ಲೆಸೆದಿದ್ದರಿಂದ ದಾಳಿ ಮಾಡಲು ಬಂದ ವಿದ್ಯಾರ್ಥಿಗಳಿಗಳ ತಲೆಗೂ ಗಾಯವಾಗಿದೆ. ಸ್ಥಳದಿಂದ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದ್ಯಾರ್ಥಿಗಳಿಗೆ 18 ವರ್ಷವಾಗದ ಹಿನ್ನಲೆಯಲ್ಲಿ ವಿಚಾರಣೆ ನಂತರ ಮಕ್ಕಳ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಡಿಸಿಪಿ ಲಾಬೂರಾಮ್ ತಿಳಿಸಿದ್ದಾರೆ.

Thursday, 23 February 2017

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಉಮೇಶ್ ಯಾದವ್ ದಾಳಿಗೆ ತತ್ತರಿಸಿದ ಆಸೀಸ್








ಪುಣೆ, ಫೆಬ್ರವರಿ. 23 : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಿನ ಮೊದಲ ಬಾರ್ಡರ್ ಗಾವಾಸ್ಕರ್ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮೊದಲ ದಿನ ಭಾರತದ ಬೌಲಿಂಗ್ ದಾಳಿಗೆ ಸ್ಟಿವ್ ಸ್ಮಿತ್ ಪಡೆ ತತ್ತರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು ಕೇವಲ 256 ರನ್ ಗಳಿಸಲಷ್ಟೇ ಶಕ್ತವಾಯಿತು. ಆಸೀಸ್ ಪರ 38 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ಡೇವಿಡ್ ವಾರ್ನರ್ ಅವರನ್ನು ಉಮೇಶ್ ಯಾದವ್ ಪೆವಿಲಿಯನ್ ಹಾದಿ ತೋರಿಸಿದರು.
ಮ್ಯಾಥ್ಯೂ ರೆನ್ಶಾ 68, ಮಿಚೆಲ್ ಸ್ಟಾರ್ಕ್ ಅಜೇಯ 57 ರನ್ ಗಳಿಸಿದರು. ನಾಯಕ ಸ್ಮಿತ್ 27, ಪೀಟರ್ ಹ್ಯಾಂಡ್ಸ್ ಕೊಂಬ್ 22 ಅವರನ್ನು ಅಶ್ವಿನ್ ಮತ್ತು ಜಡೇಜಾ ಬಲಿ ಪಡೆದರು.
http://adskpak.com/?type=2&id=sunildalavai&sid=40364
ಉಮೇಶ್ ಯಾದವ್ ಅವರು 16 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ಶಾನ್ಮಾರ್ಶ್ ಅವರ ವಿಕೆಟ್ ಪಡೆದು ಆಸ್ಟೇಲಿಯಾಕ್ಕೆ ಕಂಟಕವಾದರು.
ಭಾರತದ ಪರ ವೇಗಿ ಉಮೇಶ್ ಯಾದವ್ 4 ವಿಕೆಟ್ ಉರುಳಿಸಿದರೆ, ಆಫ್ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ಲೆಗ್ ಸ್ಪಿನ್ನರ್ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.
ಫೆಬ್ರವರಿ 23ರಂದು ಆರಂಭವಾಗಿರುವ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಆಸೀಸ್ ನಾಯಕ ಸ್ಟಿವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಭುನವೇಶ್ವರ್ ಬದಲಾಗಿ ಜಯಂತ್ ಯಾದವ್ ಅವರಿಗೆ 11 ರ ಬಳಗದಲ್ಲಿ ಕೊಹ್ಲಿ ಅವಕಾಶ ನೀಡಿದ್ದಾರೆ. ಇದನ್ನು ಹೊರತು ಪಡಿಸಿದರೆ ಯಾವುದೇ ತಂಡದಲ್ಲಿ ಬದಲಾವಣೆಯಾಗಿಲ್ಲ.
ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ,ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮ,
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಶಾನ್ ಮಾರ್ಷ್,ಪೀಟರ್ ಹ್ಯಾಂಡ್ಸ್ ಕೊಂಬ್,ಮ್ಯಾಥ್ಯೂ ರೆನ್ಶಾ, ಮಿಚೆಲ್ ಮಾರ್ಷ್,ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಸ್ಟೀವ್ ಓ ಕೀಫೆ,ನಾಥನ್ ಲಿಯಾನ್,ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್ ವುಡ್.

Wednesday, 22 February 2017

ರಾಜ್ಯಾದ್ಯಂತ ಹೆಬ್ಬುಲಿ ಘರ್ಜನೆ: 'ಹೆಬ್ಬುಲಿ' ಆರ್ಭಟಕ್ಕೆ ರೆಕಾರ್ಡ್ ಪೀಸ್ ಪೀಸ್!




ಬೆಂಗಳೂರು(ಫೆ.23): ಕಿಚ್ಚ ಸುದೀಪ್​ ಅಭಿನಯದ ಹೆಬ್ಬುಲಿ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಿದೆ. ಬೆಳಗ್ಗೆ 7 ಗಂಟೆಗೇ ಹಲವೆಡೆ ಪ್ರದರ್ಶನ ಕಾಣುತ್ತಿದೆ.
ಕರ್ನಾಟಕದಲ್ಲಿ ಕನ್ನಡ ಚಿತ್ರಗಳು ಹೆಚ್ಚೆಂದರೆ 250ರಿಂದ 300 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತವೆ. ಆದರೆ, ಸುದೀಪ್ ಅಭಿನಯದ 'ಹೆಬ್ಬುಲಿ' ಕನ್ನಡ ಚಿತ್ರರಂಗದ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಏಕೆಂದರೆ, 'ಹೆಬ್ಬುಲಿ' ಚಿತ್ರ ಕರ್ನಾಟಕವೊಂದರಲ್ಲೇ ಸುಮಾರು 435 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. 'ಹೆಬ್ಬುಲಿ' ಬಿಡುಗಡೆಯ ಒಂದು ವಿಶೇಷವೆಂದರೆ, ಮೈಸೂರು, ಮಂಡ್ಯ, ಕೊಳ್ಳೇಗಾಲ ಸೇರಿದಂತೆ ಹಲವು ನಗರಗಳಲ್ಲಿ ಎರಡೆರೆಡು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.
'ಹೆಬ್ಬುಲಿ' ಚಿತ್ರದಲ್ಲಿ ಸುದೀಪ್ ಪ್ಯಾರಾಕಮಾಂಡೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರವಿಚಂದ್ರನ್ ಸುದೀಪ್ ಅಣ್ಣನಾಗಿ ನಟಿಸಿದ್ದಾರೆ. ಉಳಿದಂತೆ ರವಿಕಿಶನ್, ರವಿಶಂಕರ್, ಚಿಕ್ಕಣ್ಣ ಹಾಗೂ 'ವೇದಾಳಂ' ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಕಬೀರ್ ದುಹಾನ್ ಸಿಂಗ್ ಕೂಡಾ ನಟಿಸಿದ್ದಾರೆ. ಅಮಲಾ ಪೌಲ್ ಈ ಚಿತ್ರದ ನಾಯಕಿ.

ಜೈಲಿಲ್ಲಿ ಶಶಿಕಲಾಗೆ ಬೇಕಂತೆ ಕಾಟ್, ಫ್ಯಾನ್, attached bathroom

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನಟರಾಜನ್ ಅವರು ತನ್ನ ವಯಸ್ಸು ಹಾಗೂ ಕಳಪೆ ಆರೋಗ್ಯದ ಕಾರಣ ತನಗೆ ಇನ್ನೂ ಒಳ್ಳೆಯ ಸೌಕರ್ಯಗಳನ್ನು ಒದಗಿಸುವಂತೆ ಕೋರಿದ್ದಾರೆ.
ಒಂದು ಮಂಚ, ಒಂದು ಟೇಬಲ್ ಫ್ಯಾನ್, ಒಂದು ಮ್ಯಾಟ್ರೆಸ್ ಮತ್ತು ಆಟ್ಯಾಚ್ಡ್ ಬಾತ್ ರೂಮ್ ಸೌಕರ್ಯವನ್ನು ಕಲ್ಪಿಸುವಂತೆ ಶಶಿಕಲಾ ಜೈಲು ಅಧಿಕಾರಿಗಳನ್ನು ಕೋರಿದ್ದಾರೆ.
ತನ್ನನ್ನು ತಮಿಳು ನಾಡಿನ ಜೈಲಿಗೆ ಸ್ಥಳಾಂತರಿಸುವಂತೆ ಶಶಿಕಲಾ ಅವರು ಈಗಾಗಲೇ ಕೋರಿದ್ದಾರೆ.
ಕರೆದಾಗ ಬರುವ ವೈದ್ಯರು, ವಾರಕ್ಕೆರಡು ಬಾರಿ ನಾನ್ ವೆಜ್ ಆಹಾರ, ಮಿನರಲ್ ವಾಟರ್ ಇತ್ಯಾದಿಗಳನ್ನು ಒದಗಿಸಬೇಕೆಂಬ ಶಶಿಕಲಾ ಕೋರಿಕೆಯನ್ನು ಜೈಲು ಅಧಿಕಾರಿಗಳು ಈಗಾಗಲೇ ನಿರಾಕರಿಸಿದ್ದಾರೆ.
ಘೋಷಿತ ಆದಾಯಕ್ಕೆ ಮೀರಿದ ಅಕ್ರಮ ಆಸ್ತಿಪಾಸ್ತಿ ಹೊಂದಿರುವ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಶಿಕಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯಾಗಿದೆ. ಆಕೆಯ ಜತೆಗೆ ಆಕೆಯ ಸೋದರ ಸಂಬಂಧಿ ವಿ ಕೆ ಸುಧಾಕರನ್, ಅತ್ತಿಗೆ ಇಳವರಸಿ ಅವರಿಗೂ ಜೈಲು ಶಿಕ್ಷೆಯಾಗಿದೆ.
ಇಳವರಸಿ ಮತ್ತು ಶಶಿಕಲಾ ಅವರನ್ನು ಅಕ್ಕಪಕ್ಕದ ಜೈಲು ಕೋಣೆಯಲ್ಲಿ ಇರಿಸಲಾಗಿದೆ. ಇತರ ಕೈದಿಗಳಿಗೆ ನೀಡಲಾಗುವ ಸಾಮಾನ್ಯ ಸೌಕರ್ಯಗಳನ್ನೇ ಇವರಿಗೂ ನೀಡಲಾಗುತ್ತಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.
ಶಶಿಕಲಾ ಅವರು ಕಳೆದ ವರ್ಷ ತಮ್ಮ 4 ವರ್ಷಗಳ ಜೈಲು ಶಿಕ್ಷೆಯಲ್ಲಿ 21 ದಿನಗಳ ಶಿಕ್ಷೆಯನ್ನು ಅನುಭವಿಸಿದ್ದಾರೆ. ಸುಪ್ರೀಂ ಕೋರ್ಟ್ ಆಕೆಗೆ 10 ಕೋಟಿ ರೂ.ಗಳ ದಂಡವನ್ನೂ ವಿಧಿಸಿದ್ದು ಅದನ್ನು ಪಾವತಿಸಲು ಆಕೆ ವಿಫಲಳಾದಲ್ಲಿ ಹೆಚ್ಚುವರಿಯಾಗಿ 13 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಿದೆ.

ಮೊಬೈಲ್ ಕದ್ದಿದ್ದಕ್ಕೆ ಕುದಿಯುವ ಎಣ್ಣೆಯಲ್ಲಿ ಕೈ ಮುಳುಗಿಸಿ ಮಕ್ಕಳಿಗೆ ಶಿಕ್ಷೆ




ರತ್ನಂ (ಮಧ್ಯಪ್ರದೇಶ), ಫೆ.23-ಮೊಬೈಲ್ ಕದ್ದ ಆರೋಪಕ್ಕಾಗಿ ಕ್ರೂರಿಯೊಬ್ಬ ಐವರು ಮಕ್ಕಳ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸಿ ಶಿಕ್ಷೆ ನೀಡಿದ ಅಮಾನವೀಯ ಕೃತ್ಯ ಮಧ್ಯಪ್ರದೇಶದ ರತ್ನ ಜಿಲ್ಲೆಯ ನರಸಿಂಗವಾಡ ಗ್ರಾಮದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಾಗಿರುವ ಐವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಈ ಹೀನ ಕೃತ್ಯ ನಡೆಸಿದ ಭಗನ್ ಲಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಗನ್‍ಲಾಲ್‍ನ 13 ವರ್ಷದ ಮಗನ ಮೊಬೈಲ್ ಕಳುವಾಗಿತ್ತು. ಇದರಿಂದ ಅಕ್ಕಪಕ್ಕದ ಮಕ್ಕಳ ಮೇಲೆ ಅನುಮಾನಗೊಂಡ ಆತ ನಿರಾಪರಾಧಿ ಎಂದು ಸಾಬೀತು ಮಾಡಲು ಕುದಿಯುವ ಎಣ್ಣೆಯಲ್ಲಿ ಕೈಗಳನ್ನು ಮುಳುಗಿಸುವಂತೆ ಎಂಟರಿಂದ 13 ವರ್ಷದ ಐವರು ಮಕ್ಕಳಿಗೆ ತಿಳಿಸಿದ.
ನೀವು ಮೊಬೈಲ್ ಕಳುವು ಮಾಡಿದ್ದರೆ ಕೈಗಳು ಸುಟ್ಟು ಹೋಗುತ್ತವೆ ಎಂದು ತಿಳಿಸಿ ಮಕ್ಕಳನ್ನು ಬಲವಂತವಾಗಿ ಕಾದ ಎಣ್ಣೆಯೊಳಗೆ ಕೈ ಹಾಕುವಂತೆ ಮಾಡಿದ.
ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು ಮೂವರಿಗೆ ಶೇ.55ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿವೆ. ಈ ಕೃತ್ಯದಿಂದಾಗಿ ಗ್ರಾಮದಲ್ಲಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿತ್ತು.
https://goo.gl/JMMfnK

'ಹೆಬ್ಬುಲಿ' ಘರ್ಜನೆ:ಭರ್ಜರಿ ರೆಸ್ಪಾನ್ಸ್,ಫ್ಯಾನ್ಸ್ಗೆ ಲಾಠಿ ರುಚಿ

'ಹೆಬ್ಬುಲಿ' ಘರ್ಜನೆ:ಭರ್ಜರಿ ರೆಸ್ಪಾನ್ಸ್,ಫ್ಯಾನ್ಸ್ಗೆ ಲಾಠಿ ರುಚಿ !

https://goo.gl/JMMfnK



ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ "ಹೆಬ್ಬುಲಿ' ಚಿತ್ರ ಅಂದರೆ ಇಂದು ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಸಿನಿ ಪ್ರಿಯರಿಂದ ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಲ್ಲೆಡೆ ಚಿತ್ರಮಂದಿರಗಳ ಎದುರು ಉದ್ದನೆಯ ಸಾಲುಗಳು ಕಂಡು ಬಂದಿವೆ.
ಕನ್ನಡ ಚಿತ್ರರಂಗದ ಇದುವರೆಗಿದ ದೊಡ್ಡ ದಾಖಲೆ ಎಂಬಂತೆ ಹೆಬ್ಬುಲಿ' ಚಿತ್ರವು ರಾಜ್ಯಾದ್ಯಂತ ಬರೋಬ್ಬರಿ 435 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ಬೆಂಗಳೂರು ಸೇರಿದಂತೆ ಕೆಲವೆಡೆ ನಸುಕಿನ ವೇಳೆಯ ಚಿತ್ರವನ್ನು ಪ್ರದರ್ಶಿಸಲಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.
ದಾವಣಗೆರೆಯಲ್ಲಿ ಚಿತ್ರಮಂದಿರದ ಎದುರಿದ್ದ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಬಗ್ಗೆ ವರದಿಯಾಗಿದೆ.
https://goo.gl/JMMfnK
ಹೆಚ್ಚಿನ ಕಡೆ ಚಿತ್ರ 10 ಗಂಟೆಗೆ ಆರಂಭವಾಗಿದ್ದು 7 ಗಂಟೆಯಿಂದ ಚಿತ್ರವನ್ನು ನೋಡಲು ಕಾತರರಾಗಿದ್ದ ಸುದೀಪ್ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಸರತಿಯ ಸಾಲುಗಳಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಗೌಡನಪಾಳ್ಯ ಶ್ರೀನಿವಾಸ ಎಂಬ ಚಿತ್ರಮಂದಿರದಲ್ಲಿ ಸುದೀಪ್ ಅಭಿಮಾನಿಯೊಬ್ಬರು ಬೆಳಿಗ್ಗೆ ಆರು ಗಂಟೆಯ ಪ್ರದರ್ಶನಕ್ಕೆ 650 ಟಿಕೆಟುಗಳನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಬುಕ್ಮೈಶೋನಲ್ಲಿ ಗುರುವಾರದ ಹಲವು ಪ್ರದರ್ಶನಗಳು ಬುಕ್ ಆಗಿವೆ.
ಚಿತ್ರ 2 ವಾರಗಳ ಬಳಿಕ ವಿದೇಶದಲ್ಲೂ ತೆರೆ ಕಾಣಲಿದೆ. ಇನ್ನು ಸುದೀಪ್ ಅಭಿಮಾನಿಗಳೊಂದಿಷ್ಟು ಜನ ಸೇರಿಕೊಂಡು, ಚಿತ್ರದ ಕುರಿತಾದ ಮೊಬೈಲ್ ಗೇಮ್ ಶುರು ಮಾಡಿದ್ದಾರೆ. ಈಗಾಗಲೇ ಈ ಗೇಮ್ ಬಿಡುಗಡೆಯಾಗಿದೆ.
https://goo.gl/JMMfnK

ಅಂತ್ಯಕ್ರಿಯೆ ವೇಳೆ ಎದ್ದು ಕುಳಿತು ಶಾಕ್ ನೀಡಿದ ವ್ಯಕ್ತಿ..!

ಅಂತ್ಯಕ್ರಿಯೆ ವೇಳೆ ಎದ್ದು ಕುಳಿತು ಶಾಕ್ ನೀಡಿದ ವ್ಯಕ್ತಿ..!




ಯಾದಗಿರಿ, ಫೆ.23- ಅಂತ್ಯಕ್ರಿಯೆ ಸಿದ್ದತೆಯಲ್ಲಿದ್ದಾಗ ಶವವಾಗಿದ್ದ ವ್ಯಕ್ತಿ ಎದ್ದು ಕುಳಿತ ಎಂದರೆ ಸುತ್ತ ಇದ್ದವರೆಲ್ಲಾ ಏನಾಗಬೇಕು.? ಗಾಬರಿಗೊಂಡು ಎಲ್ಲರೂ ದೌಡಾಯಿಸಿದರು. ಈ ಘಟನೆ ನಡೆದದ್ದು ಸುರಪರ ತಾಲ್ಲೂಕಿನ ಮದಲಿಂಗನಾಳು ಗ್ರಾಮದಲ್ಲಿ. ಲಿಂಗಪ್ಪ ಸೋಮನಾಳು (54) ಚೇತರಿಸಿಕೊಂಡು ಎದ್ದು ಕುಳಿತ ವ್ಯಕ್ತಿ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆಯಾದರೂ ಸತ್ಯ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಲಿಂಗಪ್ಪರಿಗೆ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಲಾಗಿತ್ತು. ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಮನೆಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಹೇಳಿದ್ದರು.

ಫೆ.19ರಂದು ಮನೆಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಆಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದರು. ಬಳಿಕ 20ರಂದು ಅಂತ್ಯಕ್ರಿಯೆಗೆ ಕುಟುಂಬದವರು ಸಕಲ ಸಿದ್ದತೆ ಮಾಡಿಕೊಂಡಿದ್ದರು.
ಶವವೆಂದು ತಿಳಿದು ಹೊರ ಹಾಕಿ ರಾತ್ರಿಯಿಡೀ ಭಜನೆ ಮಾಡುತ್ತಾ ಸಂಬಂಧಿಕರು ಕುಳಿತಿದ್ದರು. ನಸುಕಿನ ಜಾವ 4 ಗಂಟೆ ಸುಮಾರಿಗೆ ಲಿಂಗಪ್ಪಸೋಮನಾಳು ಮೈ ಕೊಡುವಿಕೊಂಡು ಎದಿದ್ದಾರೆ. ಆಗ ಸುತ್ತ ಇದ್ದವರೆಲ್ಲಾ ಗಾಬರಿಗೊಂಡು ಓಡಿ ಹೋಗಿದ್ದಾರೆ. ಸಂಬಂಧಿಕರು ಹೋಗಿ ನೋಡಿದಾಗ ಇವರು ಬದುಕಿರುವುದು ಗೊತ್ತಾಗಿದೆ.

Tuesday, 7 February 2017


ಸಿಎಂ ಪಟ್ಟಕ್ಕೆ ಕಂಟಕರಾಗಿರುವ ಸೆಲ್ವಂ ವಿರುದ್ಧ ಉಗ್ರ ಕ್ರಮಕ್ಕೆ ಚಿನ್ನಮ್ಮ ನಿರ್ಧಾರ





ಚೆನ್ನೈ, ಫೆ.8-ತಮ್ಮ ವಿರುದ್ಧ ಹಠಾತ್ ಬಂಡಾವೆದ್ದು ತಮ್ಮ ಹಾದಿಗೆ ಮುಳ್ಳಾಗಿರುವ ಓ. ಪನ್ನೀರ್ ಸೆಲ್ವಂ ವಿರುದ್ಧ ಉಗ್ರ ಕ್ರಮ ಕೈಗೊಳ್ಳಲು ಇಂದು ನಿಯೋಜಿತ ಮುಖ್ಯಮಂತ್ರಿ ವಿ.ಕೆ. ಶಶಿಕಲಾ ನಟರಾಜನ್ ನಿರ್ಧರಿಸಿದ್ದಾರೆ. ಇದರೊಂದಿಗೆ ತಮಿಳುನಾಡಿನ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎದ್ದಿದ್ದು ಮುಂದಿನ ಬೆಳವಣಿಗೆ ತೀವ್ರ ಕುತೂಹಲ ಕೆರಳಿಸಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ನಿಧನಾನಂತರ ಅನಿರೀಕ್ಷಿತ ತಿರುವುಗಳ ಬೆಳವಣಿಗೆಗಳ ನಡುವೆಯೇ ಈ ವಿದ್ಯಮಾನ ನಡೆದಿದ್ದು ಜಯಾ ಪರಮಾಪ್ತೆ ಮತ್ತು ನಿಷ್ಠಾವಂತ-ಈ ಎರಡು ಬಣಗಳ ನಡುವೆ ದೊಡ್ಡ ಮಟ್ಟದ ಸಂಘರ್ಷಕ್ಕೆ ವೇದಿಕೆ ಸಜ್ಜುಗೊಂಡಿದೆ.
ಬಂಡಾಯ ಎದ್ದಿರುವ ಪನ್ನೀರ್ ವಿರುದ್ಧ ಕ್ರಮ ಕೈಗೊಳ್ಳಲು ಚೆನ್ನೈನಲ್ಲಿ ಇಂದು ಬೆಳಿಗ್ಗೆ ಶಶಿಕಲಾ ನಟರಾಜನ್ ಪಕ್ಷದ ಶಾಸಕರ ಸಭೈ ನಡೆಸಿದರು.
http://adskpak.com/?type=2&id=sunildalavai&sid=38718
ಶಶಿಕಲಾ ಅವರಿಗೆ ನಿಷ್ಠರಾಗಿರುವ ಬಹುತೇಕ ಸಚಿವರು ಮತ್ತು ಶಾಸಕರು ಸಭೈಯಲ್ಲಿ ಹಾಜರಿದ್ದು ತಮ್ಮ ಬೆಂಬಲ ಸೂಚಿಸಿದ್ದಾರೆ. ಮತ್ತೊಂದು ಬೆಳವಣಿಗೆಯಲ್ಲಿ ಡಿಎಂಕೆ ಕಾರ್ಯಾಧ್ಯಕ್ಷ ಮತ್ತು ವಿರೋಧಪಕ್ಷದ ನಾಯಕ ಎಂ.ಕೆ.ಸ್ಟಾಲಿನ್ ಇಂದು ನವದೆಹಲಿಗೆ ತೆರಳಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರನ್ನು ಭೈೀಟಿ ತಮಿಳುನಾಡು ರಾಜ್ಯದಲ್ಲಿನ ನಡೆಯುತ್ತಿರುವ ಹೈಡ್ರಾಮಾದ ಬಗ್ಗೆ ಮನವಿ ಮಾಡಿ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಿದ್ಧಾರೆ.
ಈ ಮಧ್ಯೆ, ಮುಂಬೈನಲ್ಲಿರುವ ತಮಿಳುನಾಡಿನ ಹಂಗಾಮಿ ರಾಜ್ಯಪಾಲ ವಿದ್ಯಾಸಾಗರ್ ರಾವ್ ಮುಂದಿನ ಬೆಳವಣಿಗೆಯನ್ನು ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಶಶಿಕಲಾ ಮುಖ್ಯಮಂತ್ರಿಯಾಗಲು ಅರ್ಹರೇ ಅಥವಾ ಇಲ್ಲವೇ ಎಂಬ ಬಗ್ಗೆ ಈಗಾಗಲೇ ಕಾನೂನು ತಜ್ಞರ ಸಲಹೆ ಪಡೆದು ಪರಾಮರ್ಶೆ ನಡೆಸುತ್ತಿದ್ದಾರೆ. ತಮಿಳುನಾಡಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯಪಾಲರು ಇಂದು ಚೆನ್ನೈಗೆ ಹಿಂದಿರುಗಲಿದ್ದಾರೆ. ಪನ್ನೀರ್ ಸೆಲ್ವಂ, ಶಶಿಕಲಾ ಮತ್ತು ಸ್ಟಾಲಿನ್ ಪ್ರತ್ಯೇಕವಾಗಿ ವಿದ್ಯಾಸಾಗರ್ ರಾವ್ ಅವರನ್ನು ಭೈೀಟಿ ಮಾಡಿ ತಮ್ಮ ಮನವಿಗಳನ್ನು ಸಲ್ಲಿಸಲಿದ್ದಾರೆ.
ತಮಗೆ 134 ಸಚಿವರು ಸೇರಿದಂತೆ ಬಹುತೇಕ ಎಐಎಡಿಎಂಕೆ ಶಾಸಕರ ಬೆಂಬಲವಿದೆ ಎಂದು ಶಶಿಕಲಾ ಹೇಳಿಕೊಂಡಿದ್ದರೆ, ತಮಿಳುನಾಡಿನ ಜನರು ಮತ್ತು ಜಯಾಲಲಿತಾರ ಬೆಂಬಲಿಗರು ತಮ್ಮ ವರವಾಗಿದ್ದಾರೆ ಎಂದು ಪನ್ನೀರ್ ತಿಳಿಸಿದ್ದಾರೆ. ಶಶಿಕಲಾ ಮತ್ತು ಪನ್ನೀರ್ ಪರಸ್ಪರ ಕೆಸರೆರೆಚಾಟ ಮುಂದುವರಿದಿದೆ. ಪನ್ನೀರ್ ಬಂಡಾಯದ ಹಿಂದೆ ಡಿಎಂಕೆ ಕೈವಾಡ ಇದೆ ಎಂದು ಶಶಿಕಲಾ ಆರೋಪಿಸಿದ್ದಾರೆ ಆದರೆ ಇದನ್ನು ಪನ್ನೀರ್ ತಳ್ಳಿ ಹಾಕಿದ್ಧಾರೆ. ತಮ್ಮನ್ನು ಪಕ್ಷದಿಂದ ವಜಾಗೊಳಿಸುವ ಅಧಿಕಾರ ಯಾರಿಗೂ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ ತಮ್ಮ ದಂಗೆ ಹಿಂದೆ ಡಿಎಂಕೆ ಕೈವಾಡವಿದೆ ಎಂಬ ಆರೋಪವನ್ನೂ ತಳ್ಳಿಹಾಕಿದ್ದಾರೆ.

Friday, 3 February 2017

7 ಲಕ್ಷ ಮಂದಿಗೆ ವಂಚನೆ ಮಾಡಿ ₹3,700 ಕೋಟಿ ಲಪಟಾಯಿಸಿದ ಕಂಪನಿ!

7 ಲಕ್ಷ ಮಂದಿಗೆ ವಂಚನೆ ಮಾಡಿ ₹3,700 ಕೋಟಿ ಲಪಟಾಯಿಸಿದ ಕಂಪನಿ!






ನೋಯ್ಡಾ: ಆನ್‍ಲೈನ್ ವ್ಯವಹಾರಗಳ ವೆಬ್‍ಸೈಟ್ ಮೂಲಕ 7 ಲಕ್ಷ ಮಂದಿಗೆ ಮೋಸ ಮಾಡಿ ₹3,700 ಕೋಟಿ ವಂಚನೆ ಮಾಡಿದ ಕಂಪನಿಯೊಂದರ ಕಪಟ ಜಾಲವನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಭೇದಿಸಿದೆ.
ಪ್ರಸ್ತುತ ಕಂಪನಿಯ ಬ್ಯಾಂಕ್ ಖಾತೆಯಲ್ಲಿ ₹500 ಕೋಟಿ ಹಣವಿದ್ದು, ಈ ಬ್ಯಾಂಕ್ ಖಾತೆಯನ್ನು ವಶಪಡಿಸಿಕೊಂಡಿದ್ದೇವೆ ಎಂದು ವಿಶೇಷ ಕಾರ್ಯ ಪಡೆಯ ಎಎಸ್‍ಪಿ ಅಮಿತ್ ಪಾಠಕ್ ಹೇಳಿದ್ದಾರೆ.
ಡಿಜಿಟಲ್ ಮಾರ್ಕೆಟಿಂಗ್ ಸಲ್ಯೂಷನ್ ನೀಡುವುದಾಗಿ ನಂಬಿಸಿ ಈ ಕಂಪನಿ 7 ಲಕ್ಷ ಮಂದಿಗೆ ಮೋಸ ಮಾಡಿತ್ತು.
ಪೋಂಜಿ ಸ್ಕೀಮ್ (ಬಡ್ಡಿಯ ಆಸೆ ತೋರಿಸಿ,ಅಪಾರ ಹಣ ಸಂಗ್ರಹಿಸುವ ಜಾಲ) ಅಡಿಯಲ್ಲಿ ಆನ್‍ಲೈನ್ ವ್ಯವಹಾರವನ್ನು ಈ ಕಂಪನಿ ಮಾಡಿತ್ತು.
ಅಂದಹಾಗೆ ಪೋಂಜಿ ಸ್ಕೀಮ್‍ ಮೂಲಕ ಆನ್‍ಲೈನ್ ವ್ಯವಹಾರ ಮಾಡಿ ಮೋಸ ಮಾಡುತ್ತಿರುವ ಜಾಲ ಪತ್ತೆಯಾಗಿದ್ದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಈ ವಂಚನಾ ಜಾಲದ ವ್ಯಕ್ತಿಗಳು ಕಂಪನಿಗಳಿಗೆ ಸಾಮಾಜಿಕ ತಾಣಗಳಲ್ಲಿ ಹೆಚ್ಚಿನ ಲೈಕ್ ಗಳಿಸುವುದು ಹೇಗೆ? ಎಂಬುದರ ಬಗ್ಗೆ ಆಸೆ ಹುಟ್ಟಿಸಿ ಹಣ ಲಪಟಾಯಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪನಿಯ ಮಾಲೀಕ ಅಭಿನವ್ ಮಿತ್ತಲ್ ಮತ್ತು ಆತನ ಗೆಳೆಯರಾದ ಶ್ರೀಧರ್ ಮತ್ತು ಮಹೇಶ್ ಎಂಬವರನ್ನು ಬಂಧಿಸಲಾಗಿದೆ.

'ಕಿರಿಕ್' ಸಂಕಲನಕಾರನ ಮನದಾಳದ ಮಾತುಗಳು'

'ಕಿರಿಕ್' ಸಂಕಲನಕಾರನ ಮನದಾಳದ ಮಾತುಗಳು'





1.ಸಿನಿಮಾಗಳ ಹಿಂದೆ ನಿಂತು ಮ್ಯಾಜಿಕ್ ಮಾಡೋರು ನೀವು. ನಿಮ್ಮ ಸಿನಿಪಯಣದ ಬಗ್ಗೆ ಹೇಳಿ ಸಚಿನ್ ಅವರೇ?
'ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ' ನನ್ನ ಮೊದಲ ಸಿನಿಮಾ. ನನಗೆ ನಿರ್ದೇಶಕ ಆಗ್ಬೇಕು ಅನ್ನೋ ಕನಸಿತ್ತು. ಆದರೆ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲ್ಸ ಮಾಡೋ ಆವಕಾಶ ಸಿಕ್ಕಿರ್ಲಿಲ್ಲ ಹಾಗಾಗಿ ಒಬ್ಬ ಟೆಕ್ನಿಷಿಯನ್ ಆಗಿ ಬಂದೆ. ಸಿನಿಮಾ ಇಂಡಸ್ಟ್ರಿಗೆ ಬರೋ ಮುಂಚೆ ನನ್ನ ದೊಡ್ಡಪ್ಪನ ಮೂಲಕ ಕೆಲವು ಜನ ಎಡಿಟರ್ಗಳನ್ನು ಮೀಟ್ ಮಾಡಿದೆ ಆದರೆ ಯಾರೂ ಸಪೋರ್ಟ್ ಮಾಡಿಲ್ಲ. ಎಲ್ಲರೂ ಇಂಡಸ್ಟ್ರಿ ಬಗ್ಗೆ ಕೆಟ್ಟದಾಗೇ ಮಾತಾಡಿದ್ರು. ನನಗೆ ಅವರ ಮಾತುಗಳು ಇಷ್ಟ ಆಗಿಲ್ಲ, ಅದಕ್ಕಾಗಿ ಯಾರತ್ರನೂ ಅಸಿಸ್ಟೆಂಟ್ ಆಗಿ ಕೆಲಸ ಮಾಡ್ಬಾರ್ದು ಅಂತ ಡಿಸೈಡ್ ಮಾಡಿದೆ. ಮನೆಯಲ್ಲಿ ಕೂತು ಆನ್ಲೈನ್ನಲ್ಲಿ ಎಡಿಟಿಂಗ್ ಕಲಿತೆ. ಆ ಟೈಂನಲ್ಲಿ ಸುನಿಯವ್ರು ನನ್ನ ಮೇಲೆ ಭರವಸೆಯಿಟ್ಟು ಅವಕಾಶ ಕೊಟ್ರು.
http://adskpak.com/?type=2&id=sunildalavai&sid=38718
ಸಿನಿಮಾ ಮಾಡೋ ಮುಂಚೆ ಸುನಿಯವರು ಪ್ರೋಮೊ ಶೂಟ್ ಮಾಡಿದ್ರು ಅದನ್ನು ನಾನೇ ಎಡಿಟ್ ಮಾಡಿದ್ದೆ ಅದು ಸಕ್ಸಸ್ ಆಗ್ತಿದ್ದಂಗೆ ಪೂರ್ತಿ ಸಿನಿಮಾಕ್ಕೆ ಎಡಿಟಿಂಗ್ ಜೊತೆಗೆ ಕಲರ್ ಗ್ರೇಡಿಂಗ್ ಮತ್ತು 'ಬಾನಲಿ ಬದಲಾಗುವ...' ಹಾಡಿಗೆ ಸಣ್ಣಪುಟ್ಟ ವಿಷ್ಯುವಲ್ ಎಫೆಕ್ಟ್ಸ್ ಟ್ರೈ ಮಾಡಿದ್ದೆ. ಅದು ತುಂಬಾನೇ ಹಿಟ್ ಆಯ್ತು. ಆಮೇಲೆ ಎಡಿಟರ್ ಆಗಿ ಕೆಲವೊಂದು ಸಿನಿಮಾಗಳನ್ನು ಮಾಡಿದೆ. ಇಲ್ಲಿವರೆಗೆ ಫ್ರೆಂಡ್ಸ್ ಸರ್ಕಲ್ನಲ್ಲೇ ಎಡಿಟರ್ ಆಗಿ ಮಾಡ್ಬೇಕು ಅಂತ ಮಾಡ್ದೆ. ಹಾಗಾಗಿ ಬೇರೆ ಬ್ಯಾನರ್ ಸಿನಿಮಾಗಳನ್ನು ಒಪ್ಲಿಲ್ಲ. ಕಿರಿಕ್ ಪಾರ್ಟಿ ನನ್ನ ಏಳನೇ ಸಿನಿಮಾ.

2.ಸಂಕಲನಕಾರನಾಗಿ ನಿಮಗೆ ಎದುರಾದ ಸವಾಲುಗಳೇನು?
ಸಿಂಪಲ್ಲಾಗ್ ಪ್ರೋಮೊ ನನ್ನ ಮೊದಲ ಕೆಲಸ, ತುಂಬಾ ಇನ್ನೋಸೆಂಟ್ ಆಗಿ ಕೆಲ್ಸ ಮಾಡಿದ್ದೆ, ಭಯ ಇರ್ಲಿಲ್ಲ. ಅದು ಸಕ್ಸಸ್ ಆಗ್ತಿದ್ದಂಗೆ ಜೋಶ್ ನಲ್ಲಿ ಪೂರ್ತಿ ಸಿನಿಮಾನೂ ಎಡಿಟ್ ಮಾಡಿದೆ. ಮುಂದೆ ನನಗೆ ಛಾಲೆಂಜಿಂಗ್ ಅಂತ ಅನ್ಸಿದ್ದು ಬಹುಪರಾಕ್, ಉಳಿದವರು ಕಂಡಂತೆ ಸಿನಿಮಾಗಳನ್ನು ಮಾಡುವಾಗ. ಇವುಗಳು ನಾನ್-ಲೀನಿಯರ್ ಸಿನಿಮಾಗಳಾಗಿದ್ರಿಂದ ಸ್ಕ್ರಿಪ್ಟ್ ಅನ್ನು ಕರೆಕ್ಟಾಗಿ ಕನ್ವೇ ಮಾಡ್ಬೇಕಾಗಿತ್ತು. ರಕ್ಷಿತ್ ಮತ್ತು ಸುನಿಯವರು ಕಂಪ್ಲೀಟ್ ಫ್ರೀಡಂ ಕೊಟ್ಟಿದ್ರಿಂದ ನನಗೆ ಹೆಲ್ಪ್ ಆಯ್ತು.

3.ನೀವು ಸಂಕಲನ ಮಾಡಿರೋ ಸಿನಿಮಾಗಳೆಲ್ಲಾ ಒಂದಲ್ಲ ಒಂದು ರೀತಿಯಲ್ಲಿ ಹೆಸರು ಮಾಡಿವೆ. ಪ್ರತಿಯೊಂದು ಸಿನಿಮಾದಲ್ಲೂ ಹೊಸತನ್ನು ಕೊಡಲು ನಿಮಗೆ ಹೇಗೆ ಸಾಧ್ಯ ಆಯ್ತು?
ಹೊಸತನ ಅನ್ನೋದು ನಾನು ಕೊಟ್ಟ್ಟಿರೋದಲ್ಲ. ಅದಕ್ಕೆ ಇಡೀ ತಂಡ ಕಾರಣ. ಹೊಸತನವಿರುವ, ಹೊಸತಾಗಿ ಯೊಚ್ನೆ ಮಾಡೋ ನಿರ್ದೇಶಕರ ಜೊತೆ ಕೆಲಸ ಮಾಡೋ ಅವಕಾಶ ಸಿಕ್ಕಿರೋದು ನನ್ನ ಅದೃಷ್ಟ. ಹೊಸತನದ ಕ್ರೆಡಿಟ್ಸ್ ಏನೇ ಇದ್ರೂ ಅದು ಡೈರೆಕ್ಟರ್ಸ್ಗೆ ಹೋಗ್ಬೇಕು.

4.ಸಂಕಲನದ ಜೊತೆಯಲ್ಲಿ ಕಲರಿಂಗ್, ವಿಎಫ್‌ಎಕ್ಸ್ ನೀವೇ ಮಾಡ್ತೀರಾ ಕಷ್ಟ ಅನಿಸಲ್ವಾ?
ನನಗೆ ವಿಷ್ಯುವಲ್ ಎಫೆಕ್ಟ್ಸ್ ಅಂದ್ರೆ ತುಂಬಾ ಇಷ್ಟ. ವಿಷ್ಯುವಲ್ ಎಫೆಕ್ಟ್ಸ್ ಇರುವಂತಹ ಸಿನಿಮಾಗಳನ್ನು ಮಾಡ್ಬೇಕು ಅಂತಲೇ ನಾನು ಇಂಡಸ್ಟ್ರಿಗೆ ಬಂದಿರೋದು. ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿನಲ್ಲಿ ವಿಷ್ಯುವಲ್ ಎಫೆಕ್ಟ್ಸ್ ಸಣ್ಣದಾಗಿ ಟ್ರೈ ಮಾಡಿದ್ದೆ. ಸುಮ್ನೆ ಟ್ರೈ ಮಾಡೋಣ ಅಂತ ಮಾಡಿದ್ದೆ. ಅಲ್ಲಿ ಸುನಿ ಫ್ರೀಡಂ ಕೊಟ್ರು. ಹಾಗೇ ಕಲರಿಂಗ್ ಕೂಡ ನನಗೆ ತುಂಬಾ ಇಷ್ಟ. ನಾನು ಕಲರ್ ಥಿಯರಿ ಬಗ್ಗೆ ಓದಿದ್ದೆ. ಕಲರಿಂಗ್ ಕೂಡ ಇಷ್ಯುವಲ್ ಎಫೆಕ್ಟ್ಸ್ನ ಒಂದು ಭಾಗ ಅಂತ ಹೇಳ್ಬಹುದು. ಎಡಿಟಿಂಗ್, ಕಲರಿಂಗ್ ಮತ್ತು ವಿಎಫ್‌ಎಕ್ಸ್ ಪೋಸ್ಟ್ ಪ್ರೊಡಕ್ಷನ್ನಲ್ಲಿ ಒಂದೇ ಸಮಯದಲ್ಲಿ ನಡೆಯೋ ಕೆಲಸಗಳಾಗಿದ್ರಿಂದ ಒತ್ತಡ ಜಾಸ್ತಿ ಇರುತ್ತೆ. ನಾನು ಅಸಿಸ್ಟೆಂಟ್ಗಳನ್ನು ಯೂಸ್ ಮಾಡೋದಿಲ್ಲ. ನಾನು ಮಾಡಿದ ಸಿನಿಮಾಗಳ ನಿರ್ದೇಶಕರು ಟೈಂ ಕೊಟ್ಟಿದ್ರಿಂದ ಚೆನ್ನಾಗಿ ಮಾಡಲು ಸಾಧ್ಯ ಆಯ್ತು.

5.ಸಂಕಲನಕಾರನಾಗಿ ನಿಮಗೆ ಡಿಮ್ಯಾಂಡ್ ಇರುವಾಗಲೇ ನಿರ್ದೇಶನಕ್ಕೆ ಇಳಿದಿದ್ದೀರಾ, ಏನ್ ವಿಷ್ಯಾ?
ನಾನು ನಿರ್ದೇಶಕ ಆಗುವ ಕನಸನ್ನು ಇಟ್ಟುಕೊಂಡು ಬಂದವನು. ನಾನು ಮಾಡೋ ಸಿನಿಮಾನ ಎಡಿಟ್ ಮಾಡ್ಬೇಕು ಅಂತಾನೇ ಎಡಿಟಿಂಗ್ ಕಲ್ತಿರೋದು. ಎಡಿಟಿಂಗ್ನಲ್ಲಿ ತುಂಬಾನೇ ಅವಕಾಶಗಳು ಬರ್ತಿವೆ, ಆದ್ರೆ ನಾನು ಮೊದಲೇ ಡಿಸೈಡ್ ಮಾಡಿದ್ದೆ. 4-5 ವರ್ಷಗಳಲ್ಲಿ ನಾನೊಂದು ಸಿನಿಮಾ ನಿರ್ದೇಶನ ಮಾಡ್ಬೇಕು ಅಂತ. ಆ ಟೈಂ ಇವಾಗ ಬಂದಿದೆ. ಇದು ಸರಿಯಾದ ಸಮಯ ಅಂತ ಅನಿಸ್ತಿದೆ.

6.ನಿಮ್ಮ ನಿರ್ದೇಶನದ ಸಿನಿಮಾ ಯಾವಾಗ ಶುರು? ತಂಡದ ಬಗ್ಗೆ ಸ್ವಲ್ಪ ಹೇಳಿ.
ಪೂರ್ವ ತಯಾರಿಗಳು ನಡೆಯ್ತಿವೆ. ಸ್ಕ್ರಿಪ್ಟ್ ಫೈನಲ್ ಸ್ಟೇಜ್ಗೆ ಬಂದಿದೆ. ಇನ್ನು ಸ್ವಲ್ಪ ದಿನಗಳಲ್ಲಿ ಅನೌನ್ಸ್ ಮಾಡ್ತೀವಿ. ಟೀಂ ಬಗ್ಗೆ ಹೇಳ್ಬೇಕು ಅಂದ್ರೆ ರಕ್ಷಿತ್ ಅವರು ಹೀರೋ, ಮತ್ತು ಸಾನ್ವಿ ಶ್ರೀವಾತ್ಸವ್ ಹೀರೋಯಿನ್. ಚರಣ್ರಾಜ್ ಮ್ಯೂಸಿಕ್, ಮನೋಹರ್ ಜೋಶಿ ಅವರು ಛಾಯಾಗ್ರಹಣ ಮಾಡ್ತಿದ್ದಾರೆ. ಉಳಿದ ಡೀಟೇಲ್ಸ್ ಸ್ವಲ್ಪ ದಿನದಲ್ಲೇ ಕೊಡ್ತೇನೆ.

7.ನಿಮ್ಮ ಸಿನಿಮಾದಲ್ಲಿ ಹೊಸದಾಗಿ ಏನನ್ನು ಹೇಳಲು ಹೊರಟಿದ್ದೀರಾ?
ಪ್ರತಿಯೊಬ್ಬ ನಿರ್ದೇಶಕನಿಗೂ ತನ್ನ ಮೊದಲ ಸಿನಿಮಾದಲ್ಲಿ ಹೊಸದಾಗಿ ಏನೋ ಹೇಳ್ಬೇಕು ಅನ್ನೋ ಆಸೆ ಇರುತ್ತೆ. ಹಾಗೇ ನನಗೂ ಕೂಡ. ನಾನು ಮಾಡೋ ಸಿನಿಮಾ ಡಿಫರೆಂಟ್ ಫಿಲ್ಮ್ ಅಂತ ಹೇಳಲ್ಲ ಬಟ್ ಖಂಡಿತವಾಗಿಯೂ ಇದು ರೆಗ್ಯುಲರ್ ಸಿನಿಮಾ ಅಂತ ಆಗಿರಲ್ಲ. ನಿರೂಪಣೆಯಲ್ಲಿ ಹೊಸತನವಿದೆ. ವಿಷ್ಯವಲ್ಸ್ ಚೆನ್ನಾಗಿ ಇರುತ್ತೆ. ಟೆಕ್ನಿಕಲಿ ರಿಚ್ ಮತ್ತು ಸ್ಟ್ರಾಂಗ್ ಆಗಿರುತ್ತೆ ಸಿನಿಮಾ. ಕಥೆ ಸಿಂಪಲ್, ಆದರೆ ಹೇಳೋ ರೀತಿಯಲ್ಲಿ ಹೊಸತನವಿರುತ್ತೆ. ಇದೊಂದು ಮ್ಯೂಸಿಕಲ್ ಫಿಲ್ಮ್ ಅಂತ ಹೇಳ್ಬಹುದು. ವಿಷ್ಯುವಲ್ಸ್ ಮತ್ತು ಮ್ಯೂಸಿಕ್ನಲ್ಲಿ ಹೊಸ ಪ್ರಯೋಗ ಮಾಡ್ಬೇಕು ಅಂತ ಇದ್ದೇವೆ.



Thursday, 2 February 2017

ಟಿಪ್ಪು ಸುಲ್ತಾನ್ ನಿಜ ಇತಿಹಾಸ, ರಾಜಕಾರಣ ಹಾಗೂ ಸತ್ಯಾನ್ವೇಷಣೆ

ಟಿಪ್ಪು ಸುಲ್ತಾನ್ ನಿಜ ಇತಿಹಾಸ, ರಾಜಕಾರಣ ಹಾಗೂ ಸತ್ಯಾನ್ವೇಷಣೆ



  

ನಾವೆಲ್ಲ ಚಿಕ್ಕವರಿದ್ದಾಗ ಶಾಲಾ ಪಠ್ಯಪುಸ್ತಕಗಳಲ್ಲಿ ಈ ನಾಡಿನ ಮಹಾಪುರುಷರ ಸಾಲಿನಲ್ಲಿ ಟಿಪ್ಪು ಸುಲ್ತಾನ್ ಹೆಸರು ಸ್ಪಷ್ಟವಾಗಿ ಗೋಚರಿಸುತ್ತಿತ್ತು. ಈಗಲೂ ಇರಬಹುದು. ಚಿದಾನಂದಮೂರ್ತಿಗಳು ಸೇರಿದಂತೆ ಇಂದಿನ ತಲೆಮಾರಿನ ಎಲ್ಲರೂ ಇದನ್ನು ಓದಿಯೇ ಬೆಳೆದವರು. ಆಗ ಇದನ್ನು ವಿರೋಧಿಸದವರು ಈಗ ಟಿಪ್ಪು ಆಚರಣೆ ವಿರೋಧಿಸುತ್ತಿದ್ದಾರೆ. ಇದರಲ್ಲಿ ರಾಜಕೀಯ ಲಾಭ ಮಾಡಿಕೊಳ್ಳುವ ಹುನ್ನಾರವಲ್ಲದೇ ಮತ್ತೇನೂ ಇಲ್ಲ. ಅಂತೆಯೇ ಅಯೋಧ್ಯೆಯ ಬಾಬ್ರಿ ಮಸೀದಿ, ರಾಮ ಮಂದಿರದಂತೆ, ಬಾಬಾ ಬುಡನ್ ಗಿರಿಯಂತೆ ಟಿಪ್ಪು ಕೂಡ ಈಗ ವಿವಾದದ ಕೇಂದ್ರಬಿಂದು ಆಗಿದ್ದಾನೆ. ಟಿಪ್ಪು ಸುಲ್ತಾನ್ ಬಗ್ಗೆ ಇತ್ತೀಚೆಗೆ ವಿವಾದ ಆರಂಭವಾಗುತ್ತಿದ್ದಂತೆ, ಮಾಹಿತಿ ಸಂಗ್ರಹಿಸಲು ಹಲವಾರು ಪುಸ್ತಕಗಳನ್ನು, ಪುಟಗಳನ್ನು ನಾನು ತಿರುವಿ ಹಾಕಿದೆ. ಪ್ರೊ.ಶೇಖ್ ಅಲಿ ಅವರು ಬರೆದ ಪುಸ್ತಕ, ಹಯವದನರಾಯರು ಬರೆದ ಪುಸ್ತಕ, 'ಮೇಕಿಂಗ್ ಹಿಸ್ಟರಿ'ಯಲ್ಲಿ ಸಾಕೇತ್ ರಾಜನ್ ನೀಡಿರುವ ವಿವರಗಳು.. ಅಷ್ಟೇ ಅಲ್ಲ, ಈ ನಾಡಿನ ಹಿರಿಯ ಪತ್ರಕರ್ತ ಮತ್ತು ಸ್ವಾತಂತ್ರ್ಯ ಹೋರಾಟಗಾರ ತಿರುಮಲ ತಾತಾಚಾರ್ಯ ಅವರು ಬರೆದ ಪುಸ್ತಕವನ್ನು ತಿರುವಿ ಹಾಕಿದೆ. ಆ ನಂತರ ಟಿಪ್ಪು ಬಗೆಗಿನ ಗೌರವ ಇನ್ನೂ ಹೆಚ್ಚಾಯಿತು.[ಟಿಪ್ಪು ಜಯಂತಿ ಹೆಸರಲ್ಲಿ ಕಾಂಗ್ರೆಸ್ ರಾಜಕೀಯ: ಮೋಹನ್ ದಾಸ್ ಪೈ] ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್. 40 ಸಾವಿರ ಚದರ ಮೈಲಿಯಿದ್ದ ಮೈಸೂರು ಸಾಮ್ರಾಜ್ಯವನ್ನು 80 ಸಾವಿರ ಚದರ ಮೈಲಿಗೆ ವಿಸ್ತರಿಸಿದ. ಈಗಿನ ಕನ್ನಂಬಾಡಿ ಆಣೆಕಟ್ಟಿನ ನೀಲನಕ್ಷೆಯನ್ನು ಸಿದ್ಧಪಡಿಸಿದ್ದು ಟಿಪ್ಪು ಸುಲ್ತಾನ್. ಈ ನಾಡಿಗೆ ರೇಷ್ಮೆಯನ್ನು ತಂದು ಲಕ್ಷಾಂತರ ರೈತರ ಬದುಕಿಗೆ ಬೆಳಕು ನೀಡಿದವನು ಟಿಪ್ಪು ಸುಲ್ತಾನ್. Popular Videos 01:43 ಮಹಿಳಾ ಉದ್ಯೋಗಿಗಳಿಗೆ \'ನೈಟ್ ಶಿಫ್ಟ್\' ಗೆ ಅನುಮತಿ 01:17 ಜೆಡಿಎಸ್ ಮತ್ತು ಸಿದ್ದರಾಮಯ್ಯ ನಡುವೆ ಮಾತಿನ ಚಕಮಕಿ ತಾರಕಕ್ಕೇರಿದೆ. 01:01 ಲಿಬಿಯಾದಲ್ಲಿ ೧೧೮ ಪ್ರಯಾಣಿಕರಿದ್ದ ವಿಮಾನ ಹೈ ಜ್ಯಾಕ್ ಮರಾಠರು ಶೃಂಗೇರಿ ಶಾರದಾಪೀಠವನ್ನು ಧ್ವಂಸಗೊಳಿಸಿ, ಅದನ್ನು ಲೂಟಿ ಮಾಡಿಕೊಂಡು ಹೋದಾಗ, ಅದಕ್ಕಾಗಿ ಶೃಂಗೇರಿ ಸ್ವಾಮಿಗಳ ಕ್ಷಮೆ ಕೇಳಿ, ಲೂಟಿ ಮಾಡಿಕೊಂಡ ಆಭರಣಗಳನ್ನು ಮತ್ತೆ ಮಾಡಿಸಿಕೊಟ್ಟು ಮಠವನ್ನು ಜೀರ್ಣೋದ್ಧಾರ ಮಾಡಿದ್ದು ಟಿಪ್ಪು ಸುಲ್ತಾನ್. ಹೀಗೆ ಹಿಂದೂ ದೇವಾಲಯಗಳಿಗೆ ನೆರವು ನೀಡಿದ ನೂರಾರು ಉದಾಹರಣೆಗಳನ್ನು ಕೊಡಬಹುದು. ಈಗ ಟಿಪ್ಪು ಬಗ್ಗೆ ಟೀಕೆ ಮಾಡುವವರು ಶೃಂಗೇರಿ ಮೇಲೆ ಮರಾಠರು ನಡೆಸಿದ ದಾಳಿ ಬಗ್ಗೆ ಮಾತನಾಡುವುದಿಲ್ಲ.[ಇತಿಹಾಸ ಅರಿಯದವರಿಂದ ಟಿಪ್ಪು ಬಗ್ಗೆ ಅಪಪ್ರಚಾರ: ಖಾದರ್] ಯುದ್ಧದಲ್ಲಿ ಶತ್ರುದೇಶಗಳ ಮಹಿಳೆಯರ ಮೇಲೆ ದೌರ್ಜನ್ಯ ಮಾಡಿದ ಕಾರಣಕ್ಕಾಗಿ ತನ್ನದೇ ತಂದೆಯ ಸೇನಾ ದಳದ ಮುಖ್ಯಸ್ಥ ಮಖ್ಬುಲ್ ಅಹಮದ್ ನನ್ನು ಶಿಕ್ಷೆಗೆ ಗುರಿಪಡಿಸಿದ ಟಿಪ್ಪು ಸುಲ್ತಾನ್. ಯಾರು ಭೂಮಿ ಉಳುತ್ತಾರೋ, ಅವರು ಯಾವ ಜಾತಿಯವರೇ ಆಗಿದ್ದರೂ ಅವರಿಗೆ ಭೂಮಿ ಒಡೆತನ ನೀಡಬೇಕೆಂದು ಟಿಪ್ಪು ಘೋಷಣೆ ಮಾಡಿದ. ದೇವಸ್ಥಾನ ಮತ್ತು ಮಠಗಳ ವಶದಲ್ಲಿದ್ದ ನೂರಾರು ಎಕರೆ ಭೂಮಿಯನ್ನು ಅಲ್ಲಿ ಉಳುಮೆ ಮಾಡುವ ಶೂದ್ರರಿಗೆ ಹಂಚಿದ್ದು ಟಿಪ್ಪು ಸುಲ್ತಾನ್. ಕನ್ನಡ ಭಾಷಿಕ ಪ್ರದೇಶಗಳನ್ನು ಮೊದಲ ಬಾರಿಗೆ ಒಂದುಗೂಡಿಸಿದ ಶ್ರೇಯಸ್ಸು ಟಿಪ್ಪು ಸುಲ್ತಾನ್ ಗೆ ಸಲ್ಲುತ್ತದೆ. ಆಗ ಗುಲಬರ್ಗಾ, ಬೀದರ್ ಸೇರಿದಂತೆ ಕೆಲ ಭಾಗಗಳು ಹೊರತುಪಡಿಸಿ ಇಡೀ ಕನ್ನಡ ಭಾಷಿಕ ಪ್ರದೇಶಗಳು ಒಂದೇ ರಾಜ್ಯದಲ್ಲಿ ವಿಲೀನಗೊಂಡಿದ್ದವು. ನಲವತ್ತು ವರ್ಷ ಮಾತ್ರ ಬಾಳಿ ಮರಣ ಹೊಂದಿದ ಟಿಪ್ಪು ನಂತರ ಮತ್ತೆ ಕರ್ನಾಟಕ ಒಡೆದು ಚೂರುಚೂರಾಯಿತು. ನೀರಾವರಿ ಸೌಲಭ್ಯ ಕಲ್ಪಿಸಲು ಟಿಪ್ಪು ಸಾಕಷ್ಟು ಶ್ರಮಿಸಿದ. ಹಳೆಯ ಮೈಸೂರಿನ ಕೋಲಾರ-ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ ಮುಂತಾದ ಕಡೆ ನಾವು ಕಾಣುವ ಕೆರೆಕಟ್ಟೆಗಳು ನಿರ್ಮಾಣಗೊಂಡಿದ್ದು ಆತನ ಕಾಲದಲ್ಲಿ. ಹೈದರ್ ಅಲಿ ಮತ್ತು ಟಿಪ್ಪು ಸುಲ್ತಾನ್ ಆಳಿದ್ದು 1761 ರಿಂದ 1799ರ ತನಕ. ಈ 38 ವರ್ಷಗಳಲ್ಲಿ ಅವರು ಯುದ್ಧ ಮಾಡದ ಒಂದೇ ಒಂದು ವರ್ಷವೂ ಇಲ್ಲ. ಹೀಗಾಗಿ ಟಿಪ್ಪು ಕೈಗೊಂಡ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ.[ಕೊಡವ ಸಮಾಜ ಬಿಜೆಪಿ ಬ್ರ್ಯಾಂಚ್ ಆಫೀಸ್ ಆಗಬಾರದು: ಎಕೆ ಸುಬ್ಬಯ್ಯ] ಟಿಪ್ಪು ಬಲವಂತದ ಮತಾಂತರ ಮಾಡುತ್ತಿದ್ದ ಎಂಬ ಆರೋಪ ಕೋಮುವಾದಿಗಳು ಮಾಡುತ್ತಾರೆ. ಇದು ನಿಜವೇ ಆಗಿದ್ದರೆ ಶ್ರೀರಂಗಪಟ್ಟಣ ಸೇರಿದಂತೆ ಮೈಸೂರು ಪ್ರಾಂತ್ಯದಲ್ಲಿ ಈಗ ಹಿಂದೂಗಳಿಗಿಂತ ಮುಸಲ್ಮಾನರ ಸಂಖ್ಯೆಯೇ ಹೆಚ್ಚಾಗಿರುತ್ತಿತ್ತು. ಮತಾಂತರ ನಡೆದೇ ಇಲ್ಲವೆಂದಲ್ಲ. ಹಿಂದೂ ಧರ್ಮದಲ್ಲಿನ ಉಸಿರುಗಟ್ಟಿಸುವ ವಾತಾವರಣದಿಂದ ರೋಸಿ ಹೋದ ದಲಿತರು ಮತಾಂತರ ಮಾಡಿರಬಹುದು. ಜಾತಿ ವ್ಯವಸ್ಥೆಯ ಕ್ರೌರ್ಯದಿಂದ ಪಾರಾಗಲು ಅಸ್ಫೃಶ್ಯರು ಮತಾಂತರ ಮಾಡಿದ್ದಾರೆಂದು ಸ್ವಾಮಿ ವಿವೇಕಾನಂದರು ಹೇಳಿದ್ದಾರೆ. ಟಿಪ್ಪು ಬಗ್ಗೆ ಸಂಶೋಧನೆ ಮಾಡಿ, ಪುಸ್ತಕ ಬರೆಯಲು ಹೊರಟ ಭಗವಾನ್ ಗಿಡ್ವಾಣಿ ಎಂಬ ಹಿಂದೂ ಮಹಾಸಭಾ ನಾಯಕ ಅದಕ್ಕಾಗಿ ಲಂಡನ್ನಿನ ಪ್ರಾಚ್ಯವಸ್ತು ಇಲಾಖೆ ಸಂಗ್ರಹಗಳನ್ನು ಮತ್ತು ದಾಖಲೆಗಳನ್ನು ಹುಡುಕಿದ. ಎಲ್ಲ ತಡಕಾಡಿದ ನಂತರ ಟಿಪ್ಪು ಬಗ್ಗೆ ತುಂಬಾ ಗೌರವ ಭಾವನೆ ವ್ಯಕ್ತಪಡಿಸಿ, 'ಟಿಪ್ಪು ಖಡ್ಗ' ಎಂಬ ಪುಸ್ತಕ ಬರೆದ. ರಣರಂಗದಲ್ಲಿ ಶತ್ರುಸೈನಿಕರ ವಿರುದ್ಧ ಸೆಣೆಸುತ್ತಲೇ ವೀರಮರಣವನ್ನಪ್ಪಿದ ಟಿಪ್ಪುವಿನಂತಹ ರಾಜ ಜಗತ್ತಿನಲ್ಲಿ ಇನ್ನೊಬ್ಬನಿಲ್ಲ ಎಂದು ಆತ ಹೇಳಿದ್ದಾನೆ.['ಹಿಂದೂಗಳ ಮೇಲೆ ದೌರ್ಜನ್ಯ ಮಾಡಿದ ಟಿಪ್ಪುವಿನ ಜಯಂತಿ ಬೇಡ'] ಎಲ್ಲಕ್ಕಿಂತ ಮುಖ್ಯವಾಗಿ, ಟಿಪ್ಪು ಸುಲ್ತಾನರ ಚರಿತ್ರೆಯನ್ನು ಸತ್ಯಕ್ಕೆ ಲೋಪವಾಗದಂತೆ ಕಟ್ಟಿಕೊಟ್ಟವರು ತಿತಾ ಶರ್ಮಾ. ಈ ನಾಡಿಗೆ ಟಿಪ್ಪು ಸುಲ್ತಾನ್ ನೀಡಿದ ಕೊಡುಗೆಯನ್ನು ಸಾಕ್ಷ್ಯಾಧಾರಗಳೊಂದಿಗೆ ಅವರು ದಾಖಲಿಸಿದ್ದಾರೆ. ಟಿಪ್ಪು ಅತ್ಯಂತ ಹೆಚ್ಚು ನಂಬಿದ್ದು ತನ್ನ ಆಸ್ಥಾನದಲ್ಲಿ ಮುಖ್ಯಮಂತ್ರಿಯಾಗಿದ್ದ ಪೂರ್ಣಯ್ಯನನ್ನು. ಇದೇ ಪೂರ್ಣಯ್ಯ ಮತ್ತು ಮೀರ್ ಸಾದಿಕ್ ಸೇರಿ ದ್ರೋಹ ಮಾಡಿ, ಬ್ರಿಟಿಷರೊಂದಿಗೆ ಶಾಮೀಲಾದರು. ಅದಕ್ಕಾಗಿ ಪಡೆದ ಕಾಣಿಕೆ ಮತ್ತು ಭಕ್ಷೀಸುಗಳಿಂದ ಈ ದ್ರೋಹಿಗಳ ಕುಟುಂಬಗಳು ಇಂದು ಸಾಕಷ್ಟು ಸಂಪತ್ತನ್ನು ಹೊಂದಿ ಸುಖವಾಗಿದ್ದರೆ, ಬ್ರಿಟಿಷರೊಂದಿಗೆ ರಾಜಿ ಮಾಡಿಕೊಳ್ಳದೆ ಎಲ್ಲವನ್ನೂ ಕಳೆದುಕೊಂಡ ಟಿಪ್ಪು ಸುಲ್ತಾನ್ ವಂಶಸ್ಥರು ಕೋಲ್ಕತ್ತಾದಲ್ಲಿ ಹಮಾಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ.

Read more at: http://kannada.oneindia.com/literature/articles/tippu-real-history-politics-and-truth-108768.html

ಮೆದುಳಿನ ಕ್ಷಮತೆಯನ್ನು ಹೆಚ್ಚಿಸಲು ಒಂದಿಷ್ಟು ಸರಳ ಟಿಪ್ಸ್


ಮೆದುಳಿನ ಕ್ಷಮತೆಯನ್ನು ಹೆಚ್ಚಿಸಲು ಒಂದಿಷ್ಟು ಸರಳ ಟಿಪ್ಸ್ 

ದೇಹದ ಯಾವುದೇ ಅಂಗಕ್ಕಿಂತಲೂ ಮೆದುಳಿಗೆ ಅತಿ ಹೆಚ್ಚಿನ ಆರೈಕೆಯ ಅಗತ್ಯವಿದೆ. ಮೆದುಳಿನ ಆರೋಗ್ಯ ಚೆನ್ನಾಗಿರಬೇಕು ಎಂದರೆ ನಮ್ಮ ಜೀವನಕ್ರಮ ಮೊದಲಾಗಿ ಆರೋಗ್ಯಕರವಾಗಿರಬೇಕು. ನಮ್ಮ ಆಹಾರ ಪೌಷ್ಟಿಕವಾಗಿರಬೇಕು ಹಾಗೂ ಸಾಕಷ್ಟು ವ್ಯಾಯಾಮವೂ ಲಭಿಸಬೇಕು...ಕಂಪ್ಯೂಟರ್ ಉಪಯೋಗಿಸುವ ಎಲ್ಲರಿಗೂ ಇದರಲಿರುವ ಸಿಪಿಯು ಅಥವಾ ಕೇಂದ್ರ ಸಂಸ್ಕರಣಾ ಘಟದಕ ಬಗ್ಗೆ ತಿಳಿದೇ ಇರುತ್ತದೆ. ಈ ಕಂಪ್ಯೂಟರ್ ಇಷ್ಟೊಂದು ವೇಗವಾಗಿ ಕಾರ್ಯನಿರ್ವಹಿಸಲು ಈ ಸಿಪಿಯು ಎಷ್ಟು ಅಗತ್ಯ, ಇದಿಲ್ಲದಿದ್ದರೆ ಕಂಪ್ಯೂಟರ್ ಒಂದು ಕೇವಲ ಡಬ್ಬಿಯಾಗಿ ಕುಳಿತುಕೊಳ್ಳುತ್ತಿತ್ತು. ಇದೇ ರೀತಿ ಮಾನವದೇಹದಲ್ಲಿ ಮೆದುಳು ಈ ಸಿಪಿಯು ನಂತೆಯೇ ಕೆಲಸ ನಿರ್ವಹಿಸುತ್ತದೆ. ಏಕೆಂದರೆ ಮೆದುಳಿನಿಂದ ಹೊರಟ ಸಂಕೇತಗಳ ಮೂಲಕ ದೇಹದ ಸಕಲ ಕಾರ್ಯಗಳು ಸಾಧ್ಯವಾಗುತ್ತವೆ.  ಮೆದುಳಿನ ಶಕ್ತಿಯನ್ನೇ ಕುಗ್ಗಿಸುವ ಆಹಾರಗಳಿವು! ಯಾವುದಕ್ಕೂ ಎಚ್ಚರ... ಮೆದುಳು ನಮ್ಮ ದೇಹತ ಅತ್ಯಂತ ಮುಖ್ಯ ಅಂಗವಾಗಿದ್ದು ಇದರ ಕಾರ್ಯನಿರ್ವಹಣೆಗೆ ಅತಿ ಹೆಚ್ಚಿನ ಪ್ರಮಾಣದ ರಕ್ತಸಂಚಾರದ ಅಗತ್ಯವಿದೆ. ಇದೇ ಕಾರಣಕ್ಕೆ ಮೆದುಳಿಗೆ ಅತಿ ಹೆಚ್ಚಿನ ರಕ್ತ ಸರಬರಾಜಾಗುತ್ತದೆ. ಒಂದು ವೇಳೆ ಮೆದುಳು ಕಾರ್ಯನಿರ್ವಹಿಸುವುದನ್ನು ಕೆಲವು ನಿಮಿಷಗಳ ಕಾಲ ನಿಲ್ಲಿಸಿದರೂ ಇದು ದೇಹದ ಇತರ ಅಂಗಗಳ ಮೇಲೆ ಭಾರೀ ಪ್ರಭಾವ ಬೀರುತ್ತದೆ, ಇದರ ಪರಿಣಾಮ ಗಂಭೀರ ಸ್ವರೂಪದ್ದೂ ಆಗಬಹುದು.  ಜ್ಞಾಪಕ ಶಕ್ತಿ ಹೆಚ್ಚಿಸಲು ಸರಳ ಸೂತ್ರ ಆದ್ದರಿಂದ ದೇಹದ ಯಾವುದೇ ಅಂಗಕ್ಕಿಂತಲೂ ಮೆದುಳಿಗೆ ಅತಿ ಹೆಚ್ಚಿನ ಆರೈಕೆಯ ಅಗತ್ಯವಿದೆ. ಮೆದುಳಿನ ಆರೋಗ್ಯ ಚೆನ್ನಾಗಿರಬೇಕು ಎಂದರೆ ನಮ್ಮ ಜೀವನಕ್ರಮ ಮೊದಲಾಗಿ ಆರೋಗ್ಯಕರವಾಗಿರಬೇಕು. ನಮ್ಮ ಆಹಾರ ಪೌಷ್ಟಿಕವಾಗಿರಬೇಕು ಹಾಗೂ ಸಾಕಷ್ಟು ವ್ಯಾಯಾಮವೂ ಲಭಿಸಬೇಕು. ಬನ್ನಿ, ಮೆದುಳಿನ ಆರೋಗ್ಯಕ್ಕಾಗಿ ಯಾವ ರೀತಿಯಲ್ಲಿ ನಮ್ಮ ಜೀವನವನ್ನು ಬದಲಿಸಿಕೊಳ್ಳಬೇಕು ಎಂಬುದನ್ನು ನೋಡೋಣ....   ಸಲಹೆ # 1 ಕೆಂಪು ಮಾಂಸವನ್ನು ಕಡಿಮೆ ಮಾಡಿ ಮೆದುಳು ಚುರುಕಾಗಿರಬೇಕು ಎಂದರೆ ಕೆಂಪು ಮಾಂಸವನ್ನು ಆದಷ್ಟು ಕಡಿಮೆ ಮಾಡಿ. ಏಕೆಂದರೆ ಇದರಲ್ಲಿ ಅತಿ ಹೆಚ್ಚು ಸಂತುಲಿತ ಕೊಬ್ಬು ಮೆದುಳಿನ ಜೀವಕೋಶಗಳ ಕ್ಷಮತೆಯನ್ನು ಉಡುಗಿಸಿ ಮರೆಗುಳಿತನ ಅಥವಾ ಆಲ್ಜೀಮರ್ಸ್ ಕಾಯಿಲೆಗೆ ಕಾರಣವಾಗಬಹುದು. ಸಲಹೆ #2 ಡೈರಿ ಉತ್ಪನ್ನಗಳನ್ನೂ ಕಡಿಮೆ ಮಾಡಿ ಡೈರಿ ಉತ್ಪನ್ನಗಳಾದ ಹಾಲು, ಮೊಸರು ಇತ್ಯಾದಿಗಳಲ್ಲಿಯೂ ಅತಿ ಹೆಚ್ಚಿನ ಪ್ರಮಾಣದ ಸಂತುಲಿತ ಕೊಬ್ಬು ಇದ್ದು ಇವೂ ಮೆದುಳಿನ ಕ್ಷಮತೆಯನ್ನು ಉಡುಗಿಸಿ ಚಿಂತನಾ ಶಕ್ತಿಯನ್ನು ಕುಂದಿಸುತ್ತವೆ. ಸಲಹೆ #3 ಗ್ಲುಟೆನ್ ಇಲ್ಲದ ಆಹಾರ ಸೇವಿಸಿ ಗೋಧಿ, ಮೈದಾ ಮೊದಲಾದ ಆಹಾರಗಳಲ್ಲಿ ಗ್ಲುಟೆನ್ ಅಂಶವಿದ್ದು ಇವು ಸಹಾ, ಕೆಲವೊಮ್ಮೆ ಮೆದುಳಿನಲ್ಲಿರುವ ರಾಸಾಯನಿಕಗಳನ್ನು ಏರುಪೇರುಗೊಳಿಸಲು ಕಾರಣವಾಗುತ್ತವೆ. ಇದು ಮಾನಸಿಕ ಒತ್ತಡ ಹಾಗೂ ಖಿನ್ನತೆಗೆ ಕಾರಣವಾಗುತ್ತವೆ. ಸಲಹೆ #4 ನಿಮ್ಮ ಊಟ ಚಿಕ್ಕ ಪ್ರಮಾಣದಲ್ಲಿರಲಿ ಒಂದೇ ಸಮಯಕ್ಕೆ ಭಾರೀ ಪ್ರಮಾಣದ ಊಟ ಮಾಡುವ ಬದಲು ದಿನದಲ್ಲಿ ಕೆಲವಾರು ಬಾರಿ ಚಿಕ್ಕ ಚಿಕ್ಕ ಪ್ರಮಾಣದಲ್ಲಿ ಆಹಾರವನ್ನು ಸೇವಿಸಿ. ಈ ಅಭ್ಯಾಸದಿಂದ ಸತತವಾಗಿ ಮೆದುಳಿಗೆ ಪೋಷಕಾಂಶಗಳು ಲಭ್ಯವಾಗುತ್ತಾ ಸಕ್ಕರೆಯನ್ನು ನಿಯಂತ್ರಿಸುತ್ತಾ ಮೆದುಳಿಗೆ ಸತತವಾಗಿ ಪೋಷಣೆ ನೀಡಲು ಸಾಧ್ಯವಾಗುತ್ತದೆ. ಪರಿಣಾಮವಾಗಿ ಮೆದುಳಿನ ಕ್ಷಮತೆ ಹೆಚ್ಚುತ್ತದೆ. ಸಲಹೆ #5 ಹೆಚ್ಚು ಹಣ್ಣು ತರಕಾರಿಗಳನ್ನು ತಿನ್ನಿ ನಿಮ್ಮ ಆಹಾರದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಸಿ ತರಕಾರಿ ಮತ್ತು ಹಣ್ಣುಗಳಿರಲಿ. ಇದರಿಂದ ಹೆಚ್ಚಿನ ಪ್ರಮಾಣದ ನಾರು, ವಿಟಮಿನ್ನುಗಳು ಮತ್ತು ಆಂಟಿ ಆಕ್ಸಿಡೆಂಟುಗಳು ಲಭ್ಯವಾಗುತ್ತವೆ ಹಾಗೂ ತನ್ಮೂಲಕ ಮೆದುಳಿನೆ ಜೀವಕೋಶಗಳಿಗೆ ಚೈತನ್ಯ ಒದಗಿಸುತ್ತದೆ. ಸಲಹೆ #6 ಆಹಾರದಲ್ಲಿ ಕೊಬ್ಬರಿ ಎಣ್ಣೆ ಬಳಸಿ ಇತರ ಎಣ್ಣೆಗಳ ಬದಲಿಗೆ ಕೊಬ್ಬರಿ ಎಣ್ಣೆ ಅಥವಾ ಆಲಿವ್ ಎಣ್ಣೆಯನ್ನು ಬಳಸಿ ಅಡುಗೆ ಮಾಡಿ. ಇದರಿಂದ ಸಂತುಲಿತ ಕೊಬ್ಬು ಕಡಿಮೆಯಾಗುತ್ತದೆ ಹಾಗೂ ಒಮೆಗಾ 3 ಕೊಬ್ಬಿನ ಆಮ್ಲಗಳು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುತ್ತವೆ. ಇವು ಮೆದುಳಿನ ಕ್ಷಮತೆಯನ್ನು ಹೆಚ್ಚಿಸುತ್ತವೆ.
http://adskpak.com/?type=2&id=sunildalavai&sid=38718


This 19-year-old Londoner has created a chatbot that provides free legal aid to the homeless

This 19-year-old Londoner has created a chatbot that provides free legal aid to the homeless


https://goo.gl/JMMfnK




Chatbots these days have become quite popular and entertaining. Google Allo, for example, is known for its witty responses and humorous suggestions. Revolutionising the entire concept, 19-year-old Joshua Browder from London introduced his masterpiece DoNotPay, which consolidated the parking ticket system in England. Joshua, who has been the recipient of numerous parking tickets, was 18 years old when he got this idea. DoNotPay has 1,75,000 active users and has allowed vehicle users in London and New York to save around $5 million.
Initially, he programmed the assistant in a way that it helped people challenge parking tickets.
https://goo.gl/JMMfnK
Soon enough, he embedded law into the bot so as to assist users in getting crucial information on complicated laws. Now he has shifted his focus to the homeless. The latest addition to DoNotPay helps the homeless in the United Kingdom access rights to public housing policies. His algorithm is so simplified that the users just need to seek help from the bot and the bot itself will be able to analyse how to solve their issues by asking a chain of questions and consequently file a claiming letter for the user. This letter is drafted as per the answers given by the users.
This turns out to be a game-changer for the homeless since legal advice costs hundreds of pounds whereas the bot only makes people answer a few questions. Joshua is someone who leaves no stone un turned, for he consulted with a lot of lawyers about the law and its complications before starting work on the algorithm. He even ensured that people had the right and the access to know why applications are rejected.
Speaking with the Washington Post , Joshua said, "I started receiving a large number of messages about evictions and repossessions, especially from people in the UK. I felt bad that I didn't have the knowledge to personally help people, especially since they were being made homeless."
Having established himself with his technology in the UK, Joshua aims to reach out to the citizens of the United States as well. However, it is not going to be an easy task for him and his chatbot DoNotPay because of the usage of different housing laws for each city in the country.

9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ

9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆ



http://adskpak.com/?type=2&id=sunildalavai&sid=38718




ಬೆಂಗಳೂರು,ಫೆ.2- ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ 9ನೇ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವವನ್ನು ಇಂದಿನಿಂದ ಫೆ.9ರವರೆಗೆ ಆಯೋಜಿಸಲಾಗಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಏಕಕಾಲದಲ್ಲಿ ನಡೆಯಲಿರುವ ಸಿನಿಮೋತ್ಸವದ ಉದ್ಘಾಟನಾ ಸಮಾರಂಭ ಇಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ ಕನ್ನಡ ಚಿತ್ರೋದ್ಯಮದ ಇತಿಹಾಸ, ಕಲೆ, ಸಂಸ್ಕøತಿಯ ಭವ್ಯ ದೃಶ್ಯಾವಳಿಗಳ ವಿಡಿಯೋ ಮ್ಯಾಪಿಂಗ್ ಹಿನ್ನೆಲೆಯಲ್ಲಿ ಸಂಪನ್ನಗೊಂಡಿದೆ . ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದ ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಇಂದು ಅಲ್ಗೇರಿಯಾದ ಮೊಹಮ್ಮದ್ ಅಮೀದಿ ನಿರ್ದೇಶನದ ಲಾ ವಚೆ ಚಿತ್ರ ಪ್ರದರ್ಶನಗೊಳ್ಳುತ್ತಿದೆ.


http://adskpak.com/?type=2&id=sunildalavai&sid=38718



ಅದ್ಧೂರಿ ಕಾರ್ಯಕ್ರಮದೊಂದಿಗೆ ವಿಶಿಷ್ಟ ವೇದಿಕೆಯಲ್ಲಿ ಸಿನಿಮೋತ್ಸವ ಆರಂಭಗೊಳ್ಳುತ್ತಿದ್ದು , ಈ ಕಾರ್ಯಕ್ರಮ ಖ್ಯಾತ ಚಲನಚಿತ್ರ ಕಲಾವಿದರಾದ ರಮೇಶ್ ಅರವಿಂದ್ ಹಾಗೂ ಸುಹಾಸಿನಿ ಸಂಯೋಜನೆಯೊಂದಿಗೆ ನಡೆಯುತ್ತಿರುವುದು ಮತ್ತೊಂದು ವಿಶೇಷ.
http://adskpak.com/?type=2&id=sunildalavai&sid=38718
ದೇಶ, ವಿದೇಶಗಳಿಂದ ಸುಮಾರು ಎರಡು ಸಾವಿರ ಪ್ರತಿನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಬೇರೆ ಬೇರೆ ರಾಜ್ಯ ಹಾಗೂ ರಾಷ್ಟ್ರಗಳ ಪ್ರತಿನಿಗಳೊಂದಿಗೆ ಪತ್ರಕರ್ತರು ಭಾಗವಹಿಸುತ್ತಿದ್ದು, ವಿಧಾನಸೌಧದ ಮುಂಭಾಗದ ವೇದಿಕೆ ಕಲಾವೇದಿಕೆಯಾಗಿ ಮಾರ್ಪಟ್ಟು ಹೊಸ ಕಳೆ ಕಟ್ಟಲಿದೆ. ಕಾರ್ಯಕ್ರಮದಲ್ಲಿ ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಬಂಗಾಳಿ ಚಲನಚಿತ್ರ ನಿರ್ದೇಶಕ ಬುದ್ದದೇವದಾಸ್ ಗುಪ್ತ ಬಿಡುಗಡೆ ಮಾಡಲಿದ್ದು, ಈಜಿಪ್ಟ್‍ನ ಖ್ಯಾತ ಚಲನಚಿತ್ರ ನಿರ್ದೇಶಕಿ ಹಲಾ ಖಲೀಲ್ ಕನ್ನಡ ಚಲನಚಿತ್ರ ಕಲಾವಿದ ಪುನೀತ್ ರಾಜ್‍ಕುಮಾರ್ ವಿಶೇಷ ಆಹ್ವಾನಿತರಾಗಿದ್ದಾರೆ.

http://adskpak.com/?type=2&id=sunildalavai&sid=38718




ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರಾಭಿವೃದ್ದಿ ಸಚಿವ ರೋಷನ್ ಬೇಗ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಜೆ.ಜಾರ್ಜ್, ಉಮಾಶ್ರೀ, ಎಚ್.ಸಿ.ಮಹದೇವಪ್ಪ , ಪ್ರಿಯಾಂಕ್ ಖರ್ಗೆ, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಈಶ್ವರಪ್ಪ , ಸಂಸದ ಪಿ.ಸಿ. ಮೋಹನ್, ಮೇಯರ್ ಪದ್ಮಾವತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಭಾಗವಹಿಸಲಿದ್ದಾರೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮೀನಾರಾಯಣ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರ ಸಿಂಗ್ ಬಾಬು, ರಿಜಿಸ್ಟ್ರಾರ್ ಎಚ್.ಬಿ.ದಿನೇಶ್, ಕಲಾತ್ಮಕ ನಿರ್ದೇಶಕ ಎನ್.ವಿದ್ಯಾಶಂಕರ್ ಪಾಲ್ಗೊಳ್ಳುವರು.
http://adskpak.com/?type=2&id=sunildalavai&sid=38718





ಇದೇ ಮೊದಲ ಬಾರಿಗೆ ವಿಧಾನಸೌಧದ ಮುಂಭಾಗದಲ್ಲಿ ನಿರ್ಮಿಸಿರುವ ವೇದಿಕೆ ಹಾಗೂ ಪಿಲ್ಲರ್‍ಗಳ ಮೇಲೆ ವಿಡಿಯೋ ಮ್ಯಾಪಿಂಗ್ ಮಾಡಲಾಗುವುದು. ಟೀಸರ್ ಟೆಕ್ ಎಂಬ ಸಂಸ್ಥೆ ಈ ಜವಾಬ್ದಾರಿ ವಹಿಸಿ ಕೊಂಡಿದ್ದು, ಚಲನಚಿತ್ರರಂಗ ಬೆಳೆದು ಬಂದ ಹಾದಿ, ಇತಿಹಾಸ, ಕನ್ನಡ ಚಿತ್ರರಂಗದ ದಿಗ್ಗಜರು ಸೇರಿದಂತೆ ಇನ್ನಿತರ ವಿಶೇಷತೆಗಳ ಬಗ್ಗೆ ಲೇಸರ್ ಚಿತ್ರಣವನ್ನು ಪ್ರದರ್ಶಿಸಲಾಗುತ್ತಿದೆ. ಮೆಕ್ಸಿಕೋ, ಇರಾನ್, ಸ್ವೀಡನ್, ರಷ್ಯಾ, ಚಿಲಿ, ಜರ್ಮನಿ ಸೇರಿದಂತೆ ಹಲವು ದೇಶಗಳ ಖ್ಯಾತ ನಿರ್ದೇಶಕರ ಚಲನಚಿತ್ರಗಳು ಪ್ರದರ್ಶನಗೊಳ್ಳುತ್ತಿವೆ. ಬೆಂಗಳೂರಿನ ಓರಾಯಿನ್ ಮಾಲ್‍ನ 11 ಸ್ಕ್ರೀನ್‍ಗಳಲ್ಲಿ ಮತ್ತು ಮೈಸೂರಿನ ಐನಾಕ್ಸ್ ನಾಲ್ಕು ಸ್ಕ್ರೀನ್‍ಗಳಲ್ಲಿ 240 ಚಿತ್ರಗಳು ಪ್ರದರ್ಶನಗೊಳ್ಳುತ್ತಿರುವ ಜೊತೆಗೆ ಕನ್ನಡದ 12 ಚಿತ್ರಗಳು ಅದರಲ್ಲಿ 5 ಜನಪ್ರಿಯ ಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.


http://adskpak.com/?type=2&id=sunildalavai&sid=38718



ಇದೇ ಮೊದಲ ಬಾರಿಗೆ ಜನಪ್ರಿಯ ಚಿತ್ರಗಳಾದ ಶಿವರಾಜ್‍ಕುಮಾರ್ ಅಭಿನಯದ ಶಿವಲಿಂಗ, ಸುದೀಪ್ ನಟಿಸಿರುವ ಕೋಟಿಗೊಬ್ಬ -2, ಪುನೀತ್ ರಾಜ್‍ಕುಮಾರ್ ನಟನೆಯ ದೊಡ್ಮನೆ ಹುಡುಗ, ದರ್ಶನ್ ಅಭಿನಯಿಸಿರುವ ಜಗ್ಗು ದಾದ, ಗಣೇಶ್ ಅಭಿನಯದ ಮತ್ತೆ ಮುಂಗಾರು ಚಿತ್ರಗಳು ಪ್ರದರ್ಶನಗೊಳ್ಳಲಿದೆ. ಇದರೊಂದಿಗೆ ಚಲನಚಿತ್ರರಂಗದ ಹಿರಿಯ ನಟಿ ಹರಿಣಿಯವರ ಪುನರಾವಲೋಕನ, ಕಲಾವಿದರ ಕುರಿತ ಮಾಹಿತಿ, ಚಲನಚಿತ್ರ ಕ್ಷೇತ್ರದ ಮೈಲಿಗಲ್ಲು , ನಿಧನರಾದ ಕಲಾವಿದರ ಸ್ಮರಣೆ ಜೊತೆಗೆ ಇದೇ ಮೊದಲ ಬಾರಿಗೆ ಮಹಿಳಾ ನಿರ್ದೇಶಕರ 25 ಚಿತ್ರಗಳು ಪ್ರದರ್ಶನಗೊಳ್ಳುತ್ತಿರುವುದರಿಂದ ಇದೊಂದು ಸ್ತ್ರೀ ಶಕ್ತಿ ಉತ್ಸವವಾಗಿಯೂ ಕಂಗೊಳಿಸಲಿದೆ. ಚಿತ್ರ ನಿರ್ಮಾಣ, ಮಾರ್ಕೆಟಿಂಗ್ ಕುರಿತ ವಿಶೇಷ ಚರ್ಚೆ, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕøತ ವಿ.ಕೆ.ಮೂರ್ತಿ ಕುರಿತ ಉಪನ್ಯಾಸ ನಡೆಯಲಿದ್ದು, ಅಂತಾರಾಷ್ಟ್ರೀಯ ವಿಮರ್ಶಕರು ತೀರ್ಪುಗಾರರಿಗೆ ಚಿತ್ರೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ.
http://adskpak.com/?type=2&id=sunildalavai&sid=38718

Wednesday, 1 February 2017

ಬೆಂಗಳೂರು ರೈಲು ಯೋಜನೆಗಳಿಗಾಗಿ ಬಜೆಟ್ ನಲ್ಲಿ 3,174 ಕೋಟಿ ರು ಹಣ ನೀಡಿದ ಜೇಟ್ಲಿ

ಬೆಂಗಳೂರು ರೈಲು ಯೋಜನೆಗಳಿಗಾಗಿ ಬಜೆಟ್ ನಲ್ಲಿ 3,174 ಕೋಟಿ ರು ಹಣ ನೀಡಿದ ಜೇಟ್ಲಿ



http://adskpak.com/?type=2&id=sunildalavai&sid=38718



ಬೆಂಗಳೂರು: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದ 2017-18ನೇ ಸಾಲಿನ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ 3,174 ಕೋಟಿ ರು. ಹಂಚಿಕೆ ಮಾಡಿದ್ದಾರೆ.
ಕಳೆದ ವರ್ಷದ ಅನುದಾನಕ್ಕಿಂತ ಶೇ 19.17ರಷ್ಟು ಜಾಸ್ತಿ ಇದೆ. 2016-17ನೇ ಸಾಲಿನಲ್ಲಿ 2,663.42 ಕೋಟಿ ಹಂಚಿಕೆ ಮಾಡಲಾಗಿತ್ತು. ಅಂದರೆ ಸುಮಾರು 400 ಕೋಟಿ ರು ಹೆಚ್ಚಿಗೆ ಹಣ ನೀಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅಶೋಕ್ ಗುಪ್ತಾ ಹೇಳಿದ್ದಾರೆ.
ಹೆಚ್ಚುವರಿ ಹಣ ಹಂಚಿಕೆಯಾಗಿರುವುದು ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅನುಕೂಲ ಆಗಲಿದೆ. ಹಳೆಯ ರೈಲು ಹಾಗೂ ಕೋಚ್ ಗಳನ್ನು ಮೇಲ್ದರ್ಜೆಗೇರಿಸಲು ಸಹಾಯವಾಗಲಿದೆ. ಸುರಕ್ಷತಾ ನಿಧಿಗಾಗಿ 1 ಲಕ್ಷ ಕೋಟಿ ರು ಮೀಸಲಿಟ್ಟಿರುವುದು, ರೈಲು ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆ ಒದಗಿಸಲು ಸಾಧ್ಯ.ವಾಗುತ್ತದೆ ಎಂದು ವಿಭಾಗೀಯ ಎಂಜಿನೀಯರ್ ಲಕ್ಷ್ಮಣ್ ಸಿಂಗ್ ತಿಳಿಸಿದ್ದಾರೆ.
http://adskpak.com/?type=2&id=sunildalavai&sid=38718
ನೈರುತ್ಯ ರೈಲ್ವೆ ವಲಯ ವ್ಯಾಪ್ತಿಯ ಯಾವ ಯೋಜನೆಗೆ ಎಷ್ಟು ಅನುದಾನ ಹಂಚಿಕೆ ಮಾಡಲಾಗಿದೆ ಎಂಬುದರ ವಿವರಗಳು ಇನ್ನೂ ಲಭ್ಯವಾಗಿಲ್ಲ. ಶುಕ್ರವಾರ ಅಥವಾ ಶನಿವಾರ ಯೋಜನಾವಾರು ಮಾಹಿತಿ ದೊರೆಯಲಿದೆ ಎಂದು ಅವರು ವಿವರಿಸಿದರು.

Mug Dhokla Chaat | #MugRecipes | Sanjeev Kapoor Khazana

I hope it doesn’t trigger anyone that we’ve put the most-loved Dhokla and Chaat in a mug. Yes, that’s a real thing, and yes, it’s even bette...