Monday, 27 February 2017

ಪ್ರೀತಿ ವಿಚಾರದಲ್ಲಿ ಗಲಾಟೆ, ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಯ ಇರಿದು ಕೊಲೆ














ಬೆಂಗಳೂರು, ಫೆಬ್ರವರಿ 28: ಮಕ್ಕಳ ನಡುವೆ ಪ್ರೀತಿ ವಿಚಾರದಲ್ಲಿ ಎದ್ದ ಗಲಾಟೆಯೊಂದು ಕೊಲೆಯಲ್ಲಿ ಅಂತ್ಯವಾದ ದುರಂತ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.ಯಲಹಂಕ ಸರಕಾರಿ ಸಂಯುಕ್ತ ಕಾಲೇಜಿನ ವಾರ್ಷಿಕೋತ್ಸವದ ದಿನ ತಂಡ ಕಟ್ಟಿಕೊಂಡು ಬಂದು ಹಳೆ ವಿದ್ಯಾರ್ಥಿಗಳಿಬ್ಬರು ಹರ್ಷ (15) ಎನ್ನುವ 10ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಕೊಂದಿದ್ದಾರೆ. ಈತ ಯಲಹಂಕದ ಸುರಭಿ ಲೇಔಟ್ ನಿವಾಸಿ ಹಾಲು ವ್ಯಾಪಾರಿ ನಾರಾಯಣಪ್ಪ ಎನ್ನುವವರ ಮಗನಾಗಿದ್ದಾನೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.[ಬೆಂಗಳೂರಿನಲ್ಲಿ ಗಗನಸಖಿಯ ಮೇಲುಡುಪು ಎಳೆದಿದ್ದ ಆರೋಪಿ ಬಂಧನ]
ಕೊಲೆಗೆ ಕಾರಣ:
ಹರ್ಷನ ತರಗತಿಯಲ್ಲಿ ಓದುತ್ತಿರುವ ಬಾಲಕಿಯೋರ್ವಳನ್ನು ಐಟಿಐ ವಿದ್ಯಾರ್ಥಿಯೊಬ್ಬ ತುಂಬಾ ಹಚ್ಚಿಕೊಂಡಿದ್ದ. ಇದೇ ಬಾಲಕಿ ಜತೆ ಹರ್ಷನೂ ಆತ್ಮೀಯನಾಗಿದ್ದ.ಈ ವಿಚಾರ ಇಬ್ಬರ ನಡುವೆ ಮನಸ್ತಾಪಕ್ಕೆ ಕಾರಣವಾಗಿತ್ತು. ಇದರಿಂದ ಆಗಾಗ ಇಬ್ಬರ ಮಧ್ಯೆ ಸಣ್ಣ ಪುಟ್ಟ ಗಲಾಟೆಗಳು ನಡೆಯುತ್ತಿದ್ದವು.[ ಬೆಂಗಳೂರು: ಮರ್ಮಾಂಗಕ್ಕೆ ಒದ್ದು ಗಂಡನ ಕೊಲೆ ಮಾಡಿದ್ಲು ಹೆಂಡ್ತಿ]
http://adskpak.com/?type=2&id=sunildalavai&sid=40364
10 ದಿನಗಳ ಹಿಂದೆ ಹರ್ಷನಿಗೆ ನಾನು ಪ್ರೀತಿಸುತ್ತಿರುವವಳ ಜತೆ ನೀನು ಆತ್ಮೀಯನಾಗಿರುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದ. ಹೀಗಿದ್ದೂ ಆತ್ಮೀಯತೆ ಮುಂದುವರಿದಿದೆ. ಜತೆಗೆ ಕಾಲೇಜು ವಾರ್ಷಿಕೋತ್ವದಲ್ಲಿ ಫೂಟ್ಬಾಲ್ ತಂಡವನ್ನು ಗೆಲ್ಲಿಸಿದ್ದಕ್ಕಾಗಿ ಹರ್ಷನಿಗೆ ವೇದಿಕೆಯಲ್ಲಿ ಬಹುಮಾನವನ್ನೂ ನೀಡಲಾಗಿತ್ತು.
ಇದನ್ನೆಲ್ಲಾ ನೋಡಿದ ಐಟಿಐ ವಿದ್ಯಾರ್ಥಿ ವಾರ್ಷಿಕೋತ್ಸವ ಕಾರ್ಯಕ್ರಮದಿಂದ ಹೊರಗೆ ಹೋಗಿ ಗ್ಯಾಂಗ್ ಸಿದ್ದಪಡಿಸಿ ಕಾರ್ಯಕ್ರಮ ಮುಗಿಸಿ ಮನೆಗೆ ಹೋಗುತ್ತಿದ್ದ ಹರ್ಷ ಮತ್ತು ಆತನ ಗೆಳೆಯರ ಮೇಲೆ ದಾಳಿ ಮಾಡಿದ್ದಾನೆ. ಹರ್ಷನ ಎದೆಗೆ ಚಾಕು ಇರಿದಿದ್ದರಿಂದ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಹರ್ಷನ ಗೆಳೆಯರಿಗೂ ಗಂಭೀರ ಗಾಯಗಳಾಗಿವೆ.
ಘಟನೆ ತಪ್ಪಿಸಲು ಬೇರೆ ವಿದ್ಯಾರ್ಥಿಗಳು ಕಲ್ಲೆಸೆದಿದ್ದರಿಂದ ದಾಳಿ ಮಾಡಲು ಬಂದ ವಿದ್ಯಾರ್ಥಿಗಳಿಗಳ ತಲೆಗೂ ಗಾಯವಾಗಿದೆ. ಸ್ಥಳದಿಂದ ವಿದ್ಯಾರ್ಥಿಗಳು ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವಿದ್ಯಾರ್ಥಿಗಳಿಗೆ 18 ವರ್ಷವಾಗದ ಹಿನ್ನಲೆಯಲ್ಲಿ ವಿಚಾರಣೆ ನಂತರ ಮಕ್ಕಳ ಕೇಂದ್ರಕ್ಕೆ ಒಪ್ಪಿಸಲಾಗುವುದು ಎಂದು ಡಿಸಿಪಿ ಲಾಬೂರಾಮ್ ತಿಳಿಸಿದ್ದಾರೆ.

Thursday, 23 February 2017

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಉಮೇಶ್ ಯಾದವ್ ದಾಳಿಗೆ ತತ್ತರಿಸಿದ ಆಸೀಸ್








ಪುಣೆ, ಫೆಬ್ರವರಿ. 23 : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಿನ ಮೊದಲ ಬಾರ್ಡರ್ ಗಾವಾಸ್ಕರ್ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಮೊದಲ ದಿನ ಭಾರತದ ಬೌಲಿಂಗ್ ದಾಳಿಗೆ ಸ್ಟಿವ್ ಸ್ಮಿತ್ ಪಡೆ ತತ್ತರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ದಿನದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು ಕೇವಲ 256 ರನ್ ಗಳಿಸಲಷ್ಟೇ ಶಕ್ತವಾಯಿತು. ಆಸೀಸ್ ಪರ 38 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ಡೇವಿಡ್ ವಾರ್ನರ್ ಅವರನ್ನು ಉಮೇಶ್ ಯಾದವ್ ಪೆವಿಲಿಯನ್ ಹಾದಿ ತೋರಿಸಿದರು.
ಮ್ಯಾಥ್ಯೂ ರೆನ್ಶಾ 68, ಮಿಚೆಲ್ ಸ್ಟಾರ್ಕ್ ಅಜೇಯ 57 ರನ್ ಗಳಿಸಿದರು. ನಾಯಕ ಸ್ಮಿತ್ 27, ಪೀಟರ್ ಹ್ಯಾಂಡ್ಸ್ ಕೊಂಬ್ 22 ಅವರನ್ನು ಅಶ್ವಿನ್ ಮತ್ತು ಜಡೇಜಾ ಬಲಿ ಪಡೆದರು.
http://adskpak.com/?type=2&id=sunildalavai&sid=40364
ಉಮೇಶ್ ಯಾದವ್ ಅವರು 16 ರನ್ ಗಳಿಸಿ ಉತ್ತಮ ಬ್ಯಾಟಿಂಗ್ ಮಾಡುತ್ತಿದ್ದ ಶಾನ್ಮಾರ್ಶ್ ಅವರ ವಿಕೆಟ್ ಪಡೆದು ಆಸ್ಟೇಲಿಯಾಕ್ಕೆ ಕಂಟಕವಾದರು.
ಭಾರತದ ಪರ ವೇಗಿ ಉಮೇಶ್ ಯಾದವ್ 4 ವಿಕೆಟ್ ಉರುಳಿಸಿದರೆ, ಆಫ್ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ಲೆಗ್ ಸ್ಪಿನ್ನರ್ ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದು ಮಿಂಚಿದರು.
ಫೆಬ್ರವರಿ 23ರಂದು ಆರಂಭವಾಗಿರುವ ಭಾರತ ಮತ್ತು ಪ್ರವಾಸಿ ಆಸ್ಟ್ರೇಲಿಯಾ ನಡುವಣ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ ಆಸೀಸ್ ನಾಯಕ ಸ್ಟಿವ್ ಸ್ಮಿತ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ವೇಗಿ ಭುನವೇಶ್ವರ್ ಬದಲಾಗಿ ಜಯಂತ್ ಯಾದವ್ ಅವರಿಗೆ 11 ರ ಬಳಗದಲ್ಲಿ ಕೊಹ್ಲಿ ಅವಕಾಶ ನೀಡಿದ್ದಾರೆ. ಇದನ್ನು ಹೊರತು ಪಡಿಸಿದರೆ ಯಾವುದೇ ತಂಡದಲ್ಲಿ ಬದಲಾವಣೆಯಾಗಿಲ್ಲ.
ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ,ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮ,
ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಶಾನ್ ಮಾರ್ಷ್,ಪೀಟರ್ ಹ್ಯಾಂಡ್ಸ್ ಕೊಂಬ್,ಮ್ಯಾಥ್ಯೂ ರೆನ್ಶಾ, ಮಿಚೆಲ್ ಮಾರ್ಷ್,ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಸ್ಟೀವ್ ಓ ಕೀಫೆ,ನಾಥನ್ ಲಿಯಾನ್,ಮಿಚೆಲ್ ಸ್ಟಾರ್ಕ್, ಜೋಶ್ ಹೇಜಲ್ ವುಡ್.

Wednesday, 22 February 2017

ರಾಜ್ಯಾದ್ಯಂತ ಹೆಬ್ಬುಲಿ ಘರ್ಜನೆ: 'ಹೆಬ್ಬುಲಿ' ಆರ್ಭಟಕ್ಕೆ ರೆಕಾರ್ಡ್ ಪೀಸ್ ಪೀಸ್!




ಬೆಂಗಳೂರು(ಫೆ.23): ಕಿಚ್ಚ ಸುದೀಪ್​ ಅಭಿನಯದ ಹೆಬ್ಬುಲಿ ಚಿತ್ರ ರಾಜ್ಯಾದ್ಯಂತ ರಿಲೀಸ್​ ಆಗಿದೆ. ಬೆಳಗ್ಗೆ 7 ಗಂಟೆಗೇ ಹಲವೆಡೆ ಪ್ರದರ್ಶನ ಕಾಣುತ್ತಿದೆ.
ಕರ್ನಾಟಕದಲ್ಲಿ ಕನ್ನಡ ಚಿತ್ರಗಳು ಹೆಚ್ಚೆಂದರೆ 250ರಿಂದ 300 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತವೆ. ಆದರೆ, ಸುದೀಪ್ ಅಭಿನಯದ 'ಹೆಬ್ಬುಲಿ' ಕನ್ನಡ ಚಿತ್ರರಂಗದ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ. ಏಕೆಂದರೆ, 'ಹೆಬ್ಬುಲಿ' ಚಿತ್ರ ಕರ್ನಾಟಕವೊಂದರಲ್ಲೇ ಸುಮಾರು 435 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. 'ಹೆಬ್ಬುಲಿ' ಬಿಡುಗಡೆಯ ಒಂದು ವಿಶೇಷವೆಂದರೆ, ಮೈಸೂರು, ಮಂಡ್ಯ, ಕೊಳ್ಳೇಗಾಲ ಸೇರಿದಂತೆ ಹಲವು ನಗರಗಳಲ್ಲಿ ಎರಡೆರೆಡು ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.
'ಹೆಬ್ಬುಲಿ' ಚಿತ್ರದಲ್ಲಿ ಸುದೀಪ್ ಪ್ಯಾರಾಕಮಾಂಡೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರವಿಚಂದ್ರನ್ ಸುದೀಪ್ ಅಣ್ಣನಾಗಿ ನಟಿಸಿದ್ದಾರೆ. ಉಳಿದಂತೆ ರವಿಕಿಶನ್, ರವಿಶಂಕರ್, ಚಿಕ್ಕಣ್ಣ ಹಾಗೂ 'ವೇದಾಳಂ' ಚಿತ್ರದಲ್ಲಿ ವಿಲನ್ ಆಗಿ ನಟಿಸಿರುವ ಕಬೀರ್ ದುಹಾನ್ ಸಿಂಗ್ ಕೂಡಾ ನಟಿಸಿದ್ದಾರೆ. ಅಮಲಾ ಪೌಲ್ ಈ ಚಿತ್ರದ ನಾಯಕಿ.

ಜೈಲಿಲ್ಲಿ ಶಶಿಕಲಾಗೆ ಬೇಕಂತೆ ಕಾಟ್, ಫ್ಯಾನ್, attached bathroom

ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ ಕೆ ಶಶಿಕಲಾ ನಟರಾಜನ್ ಅವರು ತನ್ನ ವಯಸ್ಸು ಹಾಗೂ ಕಳಪೆ ಆರೋಗ್ಯದ ಕಾರಣ ತನಗೆ ಇನ್ನೂ ಒಳ್ಳೆಯ ಸೌಕರ್ಯಗಳನ್ನು ಒದಗಿಸುವಂತೆ ಕೋರಿದ್ದಾರೆ.
ಒಂದು ಮಂಚ, ಒಂದು ಟೇಬಲ್ ಫ್ಯಾನ್, ಒಂದು ಮ್ಯಾಟ್ರೆಸ್ ಮತ್ತು ಆಟ್ಯಾಚ್ಡ್ ಬಾತ್ ರೂಮ್ ಸೌಕರ್ಯವನ್ನು ಕಲ್ಪಿಸುವಂತೆ ಶಶಿಕಲಾ ಜೈಲು ಅಧಿಕಾರಿಗಳನ್ನು ಕೋರಿದ್ದಾರೆ.
ತನ್ನನ್ನು ತಮಿಳು ನಾಡಿನ ಜೈಲಿಗೆ ಸ್ಥಳಾಂತರಿಸುವಂತೆ ಶಶಿಕಲಾ ಅವರು ಈಗಾಗಲೇ ಕೋರಿದ್ದಾರೆ.
ಕರೆದಾಗ ಬರುವ ವೈದ್ಯರು, ವಾರಕ್ಕೆರಡು ಬಾರಿ ನಾನ್ ವೆಜ್ ಆಹಾರ, ಮಿನರಲ್ ವಾಟರ್ ಇತ್ಯಾದಿಗಳನ್ನು ಒದಗಿಸಬೇಕೆಂಬ ಶಶಿಕಲಾ ಕೋರಿಕೆಯನ್ನು ಜೈಲು ಅಧಿಕಾರಿಗಳು ಈಗಾಗಲೇ ನಿರಾಕರಿಸಿದ್ದಾರೆ.
ಘೋಷಿತ ಆದಾಯಕ್ಕೆ ಮೀರಿದ ಅಕ್ರಮ ಆಸ್ತಿಪಾಸ್ತಿ ಹೊಂದಿರುವ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಶಿಕಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯಾಗಿದೆ. ಆಕೆಯ ಜತೆಗೆ ಆಕೆಯ ಸೋದರ ಸಂಬಂಧಿ ವಿ ಕೆ ಸುಧಾಕರನ್, ಅತ್ತಿಗೆ ಇಳವರಸಿ ಅವರಿಗೂ ಜೈಲು ಶಿಕ್ಷೆಯಾಗಿದೆ.
ಇಳವರಸಿ ಮತ್ತು ಶಶಿಕಲಾ ಅವರನ್ನು ಅಕ್ಕಪಕ್ಕದ ಜೈಲು ಕೋಣೆಯಲ್ಲಿ ಇರಿಸಲಾಗಿದೆ. ಇತರ ಕೈದಿಗಳಿಗೆ ನೀಡಲಾಗುವ ಸಾಮಾನ್ಯ ಸೌಕರ್ಯಗಳನ್ನೇ ಇವರಿಗೂ ನೀಡಲಾಗುತ್ತಿದೆ ಎಂದು ಜೈಲು ಅಧಿಕಾರಿಗಳು ಹೇಳಿದ್ದಾರೆ.
ಶಶಿಕಲಾ ಅವರು ಕಳೆದ ವರ್ಷ ತಮ್ಮ 4 ವರ್ಷಗಳ ಜೈಲು ಶಿಕ್ಷೆಯಲ್ಲಿ 21 ದಿನಗಳ ಶಿಕ್ಷೆಯನ್ನು ಅನುಭವಿಸಿದ್ದಾರೆ. ಸುಪ್ರೀಂ ಕೋರ್ಟ್ ಆಕೆಗೆ 10 ಕೋಟಿ ರೂ.ಗಳ ದಂಡವನ್ನೂ ವಿಧಿಸಿದ್ದು ಅದನ್ನು ಪಾವತಿಸಲು ಆಕೆ ವಿಫಲಳಾದಲ್ಲಿ ಹೆಚ್ಚುವರಿಯಾಗಿ 13 ತಿಂಗಳ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗಿದೆ.

ಮೊಬೈಲ್ ಕದ್ದಿದ್ದಕ್ಕೆ ಕುದಿಯುವ ಎಣ್ಣೆಯಲ್ಲಿ ಕೈ ಮುಳುಗಿಸಿ ಮಕ್ಕಳಿಗೆ ಶಿಕ್ಷೆ




ರತ್ನಂ (ಮಧ್ಯಪ್ರದೇಶ), ಫೆ.23-ಮೊಬೈಲ್ ಕದ್ದ ಆರೋಪಕ್ಕಾಗಿ ಕ್ರೂರಿಯೊಬ್ಬ ಐವರು ಮಕ್ಕಳ ಕೈಗಳನ್ನು ಕುದಿಯುವ ಎಣ್ಣೆಯಲ್ಲಿ ಮುಳುಗಿಸಿ ಶಿಕ್ಷೆ ನೀಡಿದ ಅಮಾನವೀಯ ಕೃತ್ಯ ಮಧ್ಯಪ್ರದೇಶದ ರತ್ನ ಜಿಲ್ಲೆಯ ನರಸಿಂಗವಾಡ ಗ್ರಾಮದಲ್ಲಿ ನಡೆದಿದೆ. ತೀವ್ರ ಸುಟ್ಟಗಾಯಗಳಾಗಿರುವ ಐವರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಈ ಹೀನ ಕೃತ್ಯ ನಡೆಸಿದ ಭಗನ್ ಲಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಭಗನ್‍ಲಾಲ್‍ನ 13 ವರ್ಷದ ಮಗನ ಮೊಬೈಲ್ ಕಳುವಾಗಿತ್ತು. ಇದರಿಂದ ಅಕ್ಕಪಕ್ಕದ ಮಕ್ಕಳ ಮೇಲೆ ಅನುಮಾನಗೊಂಡ ಆತ ನಿರಾಪರಾಧಿ ಎಂದು ಸಾಬೀತು ಮಾಡಲು ಕುದಿಯುವ ಎಣ್ಣೆಯಲ್ಲಿ ಕೈಗಳನ್ನು ಮುಳುಗಿಸುವಂತೆ ಎಂಟರಿಂದ 13 ವರ್ಷದ ಐವರು ಮಕ್ಕಳಿಗೆ ತಿಳಿಸಿದ.
ನೀವು ಮೊಬೈಲ್ ಕಳುವು ಮಾಡಿದ್ದರೆ ಕೈಗಳು ಸುಟ್ಟು ಹೋಗುತ್ತವೆ ಎಂದು ತಿಳಿಸಿ ಮಕ್ಕಳನ್ನು ಬಲವಂತವಾಗಿ ಕಾದ ಎಣ್ಣೆಯೊಳಗೆ ಕೈ ಹಾಕುವಂತೆ ಮಾಡಿದ.
ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದು ಮೂವರಿಗೆ ಶೇ.55ಕ್ಕೂ ಹೆಚ್ಚು ಸುಟ್ಟ ಗಾಯಗಳಾಗಿವೆ. ಈ ಕೃತ್ಯದಿಂದಾಗಿ ಗ್ರಾಮದಲ್ಲಿ ಉದ್ರಿಕ್ತ ಸ್ಥಿತಿ ನಿರ್ಮಾಣವಾಗಿತ್ತು.
https://goo.gl/JMMfnK

'ಹೆಬ್ಬುಲಿ' ಘರ್ಜನೆ:ಭರ್ಜರಿ ರೆಸ್ಪಾನ್ಸ್,ಫ್ಯಾನ್ಸ್ಗೆ ಲಾಠಿ ರುಚಿ

'ಹೆಬ್ಬುಲಿ' ಘರ್ಜನೆ:ಭರ್ಜರಿ ರೆಸ್ಪಾನ್ಸ್,ಫ್ಯಾನ್ಸ್ಗೆ ಲಾಠಿ ರುಚಿ !

https://goo.gl/JMMfnK



ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ "ಹೆಬ್ಬುಲಿ' ಚಿತ್ರ ಅಂದರೆ ಇಂದು ಗುರುವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು ಸಿನಿ ಪ್ರಿಯರಿಂದ ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಎಲ್ಲೆಡೆ ಚಿತ್ರಮಂದಿರಗಳ ಎದುರು ಉದ್ದನೆಯ ಸಾಲುಗಳು ಕಂಡು ಬಂದಿವೆ.
ಕನ್ನಡ ಚಿತ್ರರಂಗದ ಇದುವರೆಗಿದ ದೊಡ್ಡ ದಾಖಲೆ ಎಂಬಂತೆ ಹೆಬ್ಬುಲಿ' ಚಿತ್ರವು ರಾಜ್ಯಾದ್ಯಂತ ಬರೋಬ್ಬರಿ 435 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.
ಬೆಂಗಳೂರು ಸೇರಿದಂತೆ ಕೆಲವೆಡೆ ನಸುಕಿನ ವೇಳೆಯ ಚಿತ್ರವನ್ನು ಪ್ರದರ್ಶಿಸಲಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.
ದಾವಣಗೆರೆಯಲ್ಲಿ ಚಿತ್ರಮಂದಿರದ ಎದುರಿದ್ದ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ ಬಗ್ಗೆ ವರದಿಯಾಗಿದೆ.
https://goo.gl/JMMfnK
ಹೆಚ್ಚಿನ ಕಡೆ ಚಿತ್ರ 10 ಗಂಟೆಗೆ ಆರಂಭವಾಗಿದ್ದು 7 ಗಂಟೆಯಿಂದ ಚಿತ್ರವನ್ನು ನೋಡಲು ಕಾತರರಾಗಿದ್ದ ಸುದೀಪ್ ಅಭಿಮಾನಿಗಳು ಚಿತ್ರಮಂದಿರಗಳ ಎದುರು ಸರತಿಯ ಸಾಲುಗಳಲ್ಲಿ ನಿಂತಿರುವ ದೃಶ್ಯ ಕಂಡು ಬಂದಿದೆ.
ಗೌಡನಪಾಳ್ಯ ಶ್ರೀನಿವಾಸ ಎಂಬ ಚಿತ್ರಮಂದಿರದಲ್ಲಿ ಸುದೀಪ್ ಅಭಿಮಾನಿಯೊಬ್ಬರು ಬೆಳಿಗ್ಗೆ ಆರು ಗಂಟೆಯ ಪ್ರದರ್ಶನಕ್ಕೆ 650 ಟಿಕೆಟುಗಳನ್ನು ಖರೀದಿಸಿದ್ದಾರೆ ಎಂದು ವರದಿಯಾಗಿದೆ. ಇನ್ನು ಬುಕ್ಮೈಶೋನಲ್ಲಿ ಗುರುವಾರದ ಹಲವು ಪ್ರದರ್ಶನಗಳು ಬುಕ್ ಆಗಿವೆ.
ಚಿತ್ರ 2 ವಾರಗಳ ಬಳಿಕ ವಿದೇಶದಲ್ಲೂ ತೆರೆ ಕಾಣಲಿದೆ. ಇನ್ನು ಸುದೀಪ್ ಅಭಿಮಾನಿಗಳೊಂದಿಷ್ಟು ಜನ ಸೇರಿಕೊಂಡು, ಚಿತ್ರದ ಕುರಿತಾದ ಮೊಬೈಲ್ ಗೇಮ್ ಶುರು ಮಾಡಿದ್ದಾರೆ. ಈಗಾಗಲೇ ಈ ಗೇಮ್ ಬಿಡುಗಡೆಯಾಗಿದೆ.
https://goo.gl/JMMfnK

ಅಂತ್ಯಕ್ರಿಯೆ ವೇಳೆ ಎದ್ದು ಕುಳಿತು ಶಾಕ್ ನೀಡಿದ ವ್ಯಕ್ತಿ..!

ಅಂತ್ಯಕ್ರಿಯೆ ವೇಳೆ ಎದ್ದು ಕುಳಿತು ಶಾಕ್ ನೀಡಿದ ವ್ಯಕ್ತಿ..!




ಯಾದಗಿರಿ, ಫೆ.23- ಅಂತ್ಯಕ್ರಿಯೆ ಸಿದ್ದತೆಯಲ್ಲಿದ್ದಾಗ ಶವವಾಗಿದ್ದ ವ್ಯಕ್ತಿ ಎದ್ದು ಕುಳಿತ ಎಂದರೆ ಸುತ್ತ ಇದ್ದವರೆಲ್ಲಾ ಏನಾಗಬೇಕು.? ಗಾಬರಿಗೊಂಡು ಎಲ್ಲರೂ ದೌಡಾಯಿಸಿದರು. ಈ ಘಟನೆ ನಡೆದದ್ದು ಸುರಪರ ತಾಲ್ಲೂಕಿನ ಮದಲಿಂಗನಾಳು ಗ್ರಾಮದಲ್ಲಿ. ಲಿಂಗಪ್ಪ ಸೋಮನಾಳು (54) ಚೇತರಿಸಿಕೊಂಡು ಎದ್ದು ಕುಳಿತ ವ್ಯಕ್ತಿ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆಯಾದರೂ ಸತ್ಯ.ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಲಿಂಗಪ್ಪರಿಗೆ ವಿಜಯಪುರ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಲಾಗಿತ್ತು. ಬದುಕುಳಿಯುವ ಸಾಧ್ಯತೆ ಕಡಿಮೆ ಇದೆ. ಮನೆಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ಹೇಳಿದ್ದರು.

ಫೆ.19ರಂದು ಮನೆಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆಂದು ಆಯಂಬುಲೆನ್ಸ್ ಸಿಬ್ಬಂದಿ ಹೇಳಿದ್ದರು. ಬಳಿಕ 20ರಂದು ಅಂತ್ಯಕ್ರಿಯೆಗೆ ಕುಟುಂಬದವರು ಸಕಲ ಸಿದ್ದತೆ ಮಾಡಿಕೊಂಡಿದ್ದರು.
ಶವವೆಂದು ತಿಳಿದು ಹೊರ ಹಾಕಿ ರಾತ್ರಿಯಿಡೀ ಭಜನೆ ಮಾಡುತ್ತಾ ಸಂಬಂಧಿಕರು ಕುಳಿತಿದ್ದರು. ನಸುಕಿನ ಜಾವ 4 ಗಂಟೆ ಸುಮಾರಿಗೆ ಲಿಂಗಪ್ಪಸೋಮನಾಳು ಮೈ ಕೊಡುವಿಕೊಂಡು ಎದಿದ್ದಾರೆ. ಆಗ ಸುತ್ತ ಇದ್ದವರೆಲ್ಲಾ ಗಾಬರಿಗೊಂಡು ಓಡಿ ಹೋಗಿದ್ದಾರೆ. ಸಂಬಂಧಿಕರು ಹೋಗಿ ನೋಡಿದಾಗ ಇವರು ಬದುಕಿರುವುದು ಗೊತ್ತಾಗಿದೆ.

Aaj Assamese cuisine ki yeh crispy aur delicious hidden gem discover kijiye! ✨ #shorts

Click to Subscribe: http://bit.ly/1h0pGXf For more recipes : https://ift.tt/6YWshaA Get Certified on Sanjeev Kapoor Academy : https://ift.tt...